Visitors have accessed this post 887 times.

‘Emergency Alert’- ಮೊಬೈಲ್‌ನಲ್ಲಿ ಸೈರನ್ ಶಬ್ದ ಕೇಳಿ ಜನ ಶಾಕ್

Visitors have accessed this post 887 times.

ಬೆಂಗಳೂರು: ಭಾರತದಲ್ಲಿನ ಅನೇಕ ಮೊಬೈಲ್ ಬಳಕೆದಾರರು ಸರ್ಕಾರದಿಂದ ತುರ್ತು ಎಚ್ಚರಿಕೆಯ ಸಂದೇಶವನ್ನು ಇಂದು ಬೆಳಿಗ್ಗೆ, ಸ್ವೀಕರಿಸಿದ್ದು, ಈ ಸಂಗತಿ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗಿದೆ. ಬೆಳಗ್ಗೆ 11:35ಕ್ಕೆ ಆಂಡ್ರಾಯ್ಡ್ ಮತ್ತು ಐಫೋನ್‌ಗಳಿಗೆ ತುರ್ತು ಸಂದೇಶ ಬಂದಿದ್ದು, ಏನಿದು ಸಂದೇಶ ? ಯಾಕೆ ಬಂತು? ಎನ್ನುವ ಪ್ರಶ್ನೆ ಜಾಲತಾಣದಲ್ಲಿ ಚರ್ಚೆಯಾಗಿದೆ.ಒಂದೆರಡು ಸೆಕೆಂಡ್‌ಗಳ ಕಾಲ ಮೊಬೈಲ್‌ನಲ್ಲಿ ಬೀಪ್ ಸೌಂಡ್ ಬಂದಿದ್ದು, ಈ ಬಗ್ಗೆ ವಿಚಾರ ಗೊತ್ತಿಲ್ಲದವರು ಆತಂಕಗೊಂಡರು. ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆಯೂ ಈ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ನಡೆದ ಸೆಲ್ ಬ್ರಾಡ್‌ಕಾಸ್ಟ್​ ಅಲರ್ಟ್​ ಸಿಸ್ಟಮ್​ ಪರೀಕ್ಷೆಯಾಗಿದೆ. ಈ ಪರೀಕ್ಷೆಯನ್ನು ವಾಸ್ತವವಾಗಿ ಇಂದು ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಮಾಡಲಾಯಿತಾದರೂ ದೇಶದ ಅನೇಕ ಮಂದಿಗೆ ಈ ಸಂದೇಶ ಬಂದಿದೆ. ಕರ್ನಾಟಕದಲ್ಲಿ ಇಂದು ಸೆಲ್ ಬ್ರಾಡ್‌ಕಾಸ್ಟ್​ ಅಲರ್ಟ್​ ಸಿಸ್ಟಮ್​ ಪರೀಕ್ಷೆಯನ್ನು ಮಾಡುವುದಾಗಿ ರಾಜ್ಯದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿತ್ತು. ರಾಜ್ಯದ ವಿವಿಧೆಡೆಗಳಲ್ಲಿ ಜನತೆಯ ಮೊಬೈಲ್​ಗೆ ತುರ್ತು ಎಚ್ಚರಿಕೆಯ ಸಂದೇಶ ಬರಲಿದೆ. ಹೀಗಾಗಿ ಯಾರೂ ಗಾಬರಿ ಪಡಬೇಕಿಲ್ಲ. ಇದು ಸರ್ಕಾರದ ವತಿಯಿಂದಲೇ ನಡೆಯುತ್ತಿರುವ ಪರೀಕ್ಷೆಯಾಗಿದೆ. ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ನಾಗರಿಕರ ಅಮೂಲ್ಯವಾದ ಪ್ರಾಣವನ್ನು ಉಳಿಸಲು ತುರ್ತು ಸಂವಹನ ಅಭಿವೃದ್ಧಿಗಾಗಿ ಈ ಸೆಲ್ ಬ್ರಾಡ್‌ಕಾಸ್ಟ್​ ಅಲರ್ಟ್​ ಸಿಸ್ಟಮ್​ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *