Visitors have accessed this post 846 times.

ಹುಲಿ ಉಗುರಿನ ಲಾಕೆಟ್​ ಧರಿಸಿದ್ದ ನಟ ದರ್ಶನ್‌ಗೆ ಸಂಕಷ್ಟ , ದೂರು ದಾಖಲು, ಬಂಧನದ ಭೀತಿ

Visitors have accessed this post 846 times.

ಬೆಂಗಳೂರು: ನಟ ದರ್ಶನ್‌ ಅವರು ಹುಲಿ ಉಗುರಿನ ಲಾಕೆಟ್​ ಧರಿಸಿದ್ದಾರೆ ಎನ್ನಲಾಗುತ್ತಿದ್ದು, ವರ್ತೂರು ಸಂತೋಷ್​ ಬಂಧನದ ಬೆನ್ನಲೇ ಫೋಟೋವೊಂದು ವೈರಲ್‌ ಆಗುತ್ತಿದೆ. ಈ ನಡುವೆ ದರ್ಶನ್‌ವ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕೂಡ ಅನೇಕ ಮಂದಿ ಆಗ್ರಹ ವ್ಯಕ್ತಪಡಿಸುತ್ತಿದ್ದಾರೆ.

 

ಅಂದ ಹಾಗೇ ನಟ ದರ್ಶನ್​ ಹಾಗೂ ವಿನಯ್​ ಗುರೂಜಿ ಅವರ ವಿರುದ್ಧ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್​ ಅವರು ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ. ನಟ ದರ್ಶನ್, ವಿನಯ್ ಗುರೂಜಿಯನ್ನೂ ಕರೆಸಿ ವಿಚಾರಿಸಿ ಅವರನ್ನು ಕರೆಸಿ ವಿಚಾರಣೆ ಮಾಡಿ ಅಂಥ ಆಗ್ರಹಿಸುತ್ತಿದ್ದಾರೆ.

ಈ ನಡುವೆ ವರ್ತೂರು ಸಂತೋಷ್​ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ರಲ್ಲಿ ಸ್ಪರ್ಧಿ ಆಗಿದ್ದರು, ಅವರನ್ನು ಹುಲಿ ಉಗುರು ಇರುವ ಲಾಕೆಟ್​ ಧರಿಸಿದ್ದರಿಂದ ಅವರನ್ನು ಪೊಲೀಸರು ಬಂಧಿಸಿದ್ದು, ಸದ್ಯ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಸದ್ಯ ದರ್ಶನ್‌ ಮತ್ತು ವಿನಯ್​ ಗುರೂಜಿ ವಿರುದ್ಧ ದೂರು ದಾಖಲು ಆಗಿರುವ ಹಿನ್ನಲೆಯಲ್ಲಿ ಇಬ್ಬರನ್ನು ಕರೆಸಿ ವಿಚಾರಣೆ ಮಾಡುತ್ತಾರ? ಇಲ್ಲವೇ ಬಂಧನ ಮಾಡುತ್ತಾರ ಎನ್ನುವುದು ಈಗ ಸದ್ಯದ ಪ್ರಶ್ನೆಯಾಗಿದೆ.

Leave a Reply

Your email address will not be published. Required fields are marked *