Visitors have accessed this post 353 times.
ಪುತ್ತೂರು: ಸಿಟೌಟ್ ನ ಮೇಲ್ಚಾವಣಿಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ವೇಳೆ ಮೇಲ್ಚಾವಣಿ ಕುಸಿದು ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿ, ಇನ್ನೋರ್ವ ವ್ಯಕ್ತಿ ಗಾಯಗೊಂಡಿರುವ ಘಟನೆ ಪುತ್ತೂರಿನ ಅರಿಯಡ್ಕ ಗ್ರಾಮದ ಪಾದಲಾಡಿ ಕಮಲ ಎಂಬವರ ಮನೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಶೇಖರ್ ಕುಲಾಲ್ ರವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೃತ ಪಟ್ಟ ವ್ಯಕ್ತಿಯನ್ನು ಪುತ್ತೂರು ನಿವಾಸಿ ಶೇಖರ್ ಕುಲಾಲ್ ಹಾಗೂ ಗಾಯಗೊಂಡಿರುವ ಸಂಜೀವ ಮೊಗೇರ ಎಂದು ಗುರುತಿಸಲಾಗಿದೆ. ಸರಿಯಾಗಿ ಕ್ಯೂರಿಂಗ್ ಆಗದಿರುವ ಸ್ಥಳದಲ್ಲಿ ಕೆಲಸ ಮಾಡುವುದು ಜೀವಕ್ಕೆ ಅಪಾಯ ಎಂದೂ ತಿಳಿದಿದ್ದರೂ ಕೂಡಾ ಕೆಲಸ ಮಾಡಿಸಿದ ಕಾಂಟ್ರ್ಯಾಕ್ಟರ್ ಸಂಜೀವ ಮೊಗೇರ ಹಾಗೂ ಮಾಲೀಕರಾದ ಕಮಲರವರ ನಿರ್ಲಕ್ಷ್ಯತನ ಈ ಅವಘಡಕ್ಕೆ ಕಾರಣ ಎಂಬುದಾಗಿ ಮೃತನ ಸಹೋದರ ದಿನೇಶ್ ಕುಲಾಲ್ ಎಂಬವರು ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.