Visitors have accessed this post 377 times.

ಬೆಂಗಳೂರು: ಉದ್ಯಮಿ ಪೂಜಾರಿಗೆ ವಂಚನೆ ಕೇಸ್‌- ಚೈತ್ರಾ & ಗ್ಯಾಂಗ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಸಿಬಿ ಸಿದ್ಧತೆ

Visitors have accessed this post 377 times.

ಬೆಂಗಳೂರು: ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಪೂರ್ಣಗೊಳಿಸಿದ್ದು, ಚೈತ್ರಾ & ಗ್ಯಾಂಗ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಮುಂದಾಗಿದ್ದಾರೆ. ವಂಚನೆ ಕುರಿತು 68 ಸಾಕ್ಷ್ಯಗಳನ್ನು ಕಲೆ ಹಾಕಿರುವ ಸಿಸಿಬಿ ಪೊಲೀಸರು ಆರೋಪಿಗಳ ವಿರುದ್ಧ ಮುಂದಿನ ವಾರ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲಿದೆ ಎಂದು ತಿಳಿದು ಬಂದಿದೆ. ವಂಚನೆ ಪ್ರಕರಣದಲ್ಲಿ‌ ಈಗಾಗಲೇ ಸಿಸಿಬಿ ಪೊಲೀಸರು ಬರೋಬ್ಬರಿ 4 ಕೋಟಿ 11 ಲಕ್ಷ ರೂಪಾಯಿಯನ್ನು ಜಪ್ತಿ ಮಾಡಿದ್ದಾರೆ. ವಂಚನೆಗೆ ಸಂಬಂಧಿಸಿದ ಪ್ರಾಥಮಿಕ ಸಾಕ್ಷ್ಯ, ಡಿಜಿಟಲ್ ಸಾಕ್ಷ್ಯ, ಸಾಂದರ್ಭಿಕ ಸಾಕ್ಷ್ಯಗಳನ್ನು ಕಲೆಹಾಕಲಾಗಿದ್ದು, ಪ್ರಮುಖ ಆರೋಪಿಗಳಾದ ಚೈತ್ರಾ, ಶ್ರೀಕಾಂತ್, ಗಗನ್ ಕಡೂರು, ಹಾಲಶ್ರೀ, ಧನರಾಜ್ ಸೇರಿದಂತೆ 7 ಆರೋಪಿಗಳ ವಿರುದ್ಧ ಸಿಸಿಬಿ, ಚಾರ್ಚ್‌ಶೀಟ್​ ಸಲ್ಲಿಸಲಿರುವುದಾಗಿ ಸಿಸಿಬಿ ಮೂಲಗಳು ತಿಳಿಸಿವೆ. ದೂರುದಾರ ಗೋವಿಂದ ಬಾಬು ಪೂಜಾರಿಯಿಂದ ಪಡೆಯಲಾದ ಆಡಿಯೋ, ವಿಡಿಯೋಗಳ ಬಗ್ಗೆ ಚಾರ್ಜ್ ಶೀಟ್​ನಲ್ಲಿ‌ ಉಲ್ಲೇಖಿಸಲಾಗಿದ್ದು, ಆರೋಪಿಗಳ ಮೊಬೈಲ್ ಫೋನ್‌ಗಳಿಂದ ರಿಟ್ರೀವ್ ಮಾಡಲಾದ ಡಾಟಾ ವರದಿ ಕೂಡ ಚಾರ್ಜ್ ಶೀಟ್​ನಲ್ಲಿ‌ ಉಲ್ಲೇಖಿಸಲಾಗಿದೆ. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಿಗೆ ಜಾಮೀನು ದೊರೆತಿಲ್ಲ.

Leave a Reply

Your email address will not be published. Required fields are marked *