November 8, 2025
WhatsApp Image 2023-11-11 at 8.41.18 AM

ಬಂಗಾರಪೇಟೆ  ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ  ನಿಧನರಾಗಿದ್ದಾರೆ. ಕಾಂಗ್ರೆಸ್​ನ ಹಿರಿಯ ಮುಖಂಡ ಸಿ.ವೆಂಕಟೇಶಪ್ಪ ಅವರಿಗೆ ಕಳೆದ ರಾತ್ರಿ (ನ.10) ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೋಲಾರದ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸಿ.ವೆಂಕಟೇಶಪ್ಪ ಅವರು ಅಪಾರ ಅಭಿಮಾನಿಗಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ರವಾನೆ ಮಾಡಲಾಗಿದೆ.ಸಿ.ವೆಂಕಟೇಶಪ್ಪ ಬಂಗಾರಪೇಟೆ ತಾಲೂಕಿನ ಬುವನಹಳ್ಳಿ ಗ್ರಾಮದವರು. ಇವರು ಮೂರು ಬಾರಿ ಶಾಸಕರಾಗಿದ್ದರು. ಆಗಿನ ಬೇತಮಂಗಲ ವಿಧಾನಸಭಾ ಕ್ಷೇತ್ರದಿಂದ 1978, 1983, 1999 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಸಿ. ವೆಂಕಟೇಶಪ್ಪ ಅವರಿಗೆ 73 ವರ್ಷ ವಯಸ್ಸಾಗಿತ್ತು. ನವೆಂಬರ್ 9 ರಂದು ಅವರ ಹುಟ್ಟು ಹಬ್ಬ ಆಚರಣೆ ಮಾಡಲಾಗಿತ್ತು

About The Author

Leave a Reply