Visitors have accessed this post 1003 times.

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

Visitors have accessed this post 1003 times.

ಪುತ್ತೂರು : ರಾಷ್ಟ್ರೀಯ ಹೆದ್ದಾರಿ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಉಪ್ಪಿನಂಗಡಿ 34 ನೆಕ್ಕಿಲಾಡಿಯ ಭಾರತ್ ಪೆಟ್ರೋಲ್ ಬಂಕ್ ಎದುರಿನಲ್ಲಿ ಇಂದು ನಡೆದಿದೆ.

ಮೃತ ವ್ಯಕ್ತಿಯನ್ನು ಆಂಧ್ರ ಮೂಲದ ಶೇಖ್ ಖಾನ್ ಎಂದು ಗುರುತಿಸಲಾಗಿದೆ.ಇಂದು ಬೆಳಗ್ಗೆ 7:30ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ. ಮುಂಜಾನೆ ಯಾವುದೋ ವಾಹನ ಅವರಿಗೆ ಢಿಕ್ಕಿ ಹೊಡೆದು ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಹಾಗೂ ಪುತ್ತೂರು ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *