Visitors have accessed this post 1243 times.

ಮುಡಿಪು : ವರ್ಷದ ಯುವಕ ನೇಣು ಬಿಗಿದು ಆತ್ಮಹತ್ಯೆ..!

Visitors have accessed this post 1243 times.

ಉಳ್ಳಾಲ: ಮುಡಿಪು ಬಳಿಯ ಕಾರ್ ಗ್ಯಾರೇಜ್‌ನಲ್ಲಿ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ಕಿಶೋರ್ (25) ಎಂದು ಗುರುತಿಸಲಾಗಿದ್ದು, ಮುಡಿಪುವಿನಲ್ಲಿ ಜಯಾ ಎಂಬುವರಿಗೆ ಸೇರಿದ್ದ ಕಾರು ಗ್ಯಾರೇಜ್‌ನಲ್ಲಿ ಕಬ್ಬಿಣದ ರಾಡ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಿಶೋರ್‌ ಕಂಕನಾಡಿಯ ಕಾರ್ ಶೋ ರೂಂನಲ್ಲಿ ಮೆಕ್ಯಾನಿಕ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ನ.20 ರಂದು ಕೆಲಸಕ್ಕೆ ಹೋಗಿದ್ದು ತಡವಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ ಆತನ ಕುಟುಂಬಸ್ಥರು ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿದರೂ ಕಿಶೋರ್ ಪತ್ತೆಯಾಗಿರಲಿಲ್ಲ. ಕೊನೆಗೆ ಕಿಶೋರ್‌ ಪ್ರತಿದಿನ ಕೆಲಸ ಬಿಟ್ಟು ಕೆಲಹೊತ್ತು ಕುಳಿತುಕೊಳ್ಳುತ್ತಿದ್ದ ಮುಡಿಪುವಿನ ಗ್ಯಾರೇಜ್‌ ನಲ್ಲಿ ಹುಡುಕಾಟ ನಡೆಸಿದ್ದರು. ಆ ವೇಳೆ ಆತನ ಬೈಕ್‌ ಕಂಡಿದ್ದು, ಗ್ಯಾರೇಜ್‌ನಲ್ಲಿ ಕಬ್ಬಿಣದ ರಾಡ್‌ಗೆ ಕಿಶೋರ್ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಕಿಶೋರ್ ಕೆಲಸ ಮಾಡುತ್ತಿದ್ದ ಶೋರೂಂನ ಮೇಲ್ವಿಚಾರಕ ಆರು ತಿಂಗಳ ಹಿಂದೆಯಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಮೇಲ್ವಿಚಾರಕ ಕಿಶೋರ್ ಅವರಿಗೆ ಅತ್ಯಂತ ಆತ್ಮೀಯ ಸ್ನೇಹಿತರಾಗಿದ್ದು, ಆತನ ಅಗಲಿಕೆಯ ಖಿನ್ನತೆಯಿಂದ ಕಿಶೋರ್‌ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಕೊಣಾಜೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *