Visitors have accessed this post 352 times.

ಮುಸ್ಲಿಮರ ಮೀಸಲಾತಿ ಪ್ರಮಾಣವನ್ನು ಶೇಕಡಾ 8 ಕ್ಕೆ ಏರಿಸುವುದು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ದ್ವನಿ ಎತ್ತುವಂತೆ ಆಗ್ರಹಿಸಿ SDPI ಪುತ್ತೂರು ಶಾಸಕರಿಗೆ ಮನವಿ

Visitors have accessed this post 352 times.

ಪುತ್ತೂರು : ಸಾಮಾಜಿಕ ನ್ಯಾಯದ ನೆಲೆಕಟ್ಟಿನಲ್ಲಿ , ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಮುಸ್ಲಿಮರ ಮೀಸಲಾತಿ ಸಮಸ್ಯೆಯ ಗೊಂದಲವನ್ನು ಸರಿಪಡಿಸಿ ಮುಸ್ಲಿಮರ ಮೀಸಲಾತಿಯನ್ನು ಶೇಕಡಾ ಎಂಟಕ್ಕೆ ಏರಿಸಬೇಕು,ಕಾಂತರಾಜು ಅಯೋಗದ ವರದಿಯನ್ನು ಬಿಡುಗಡೆ ಮಾಡಬೇಕು ಮತ್ತು ಸದಾಶಿವ ಅಯೋಗದ ವರದಿಯನ್ನು ರಾಜ್ಯ ಸರಕಾರ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂಬ ವಿಚಾರದಲ್ಲಿ ಡಿಸೆಂಬರ್ 4 ರಿಂದ ಬೆಳಗಾವಿಯ ಸುವರ್ಣ ಸೌದದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಶಾಸಕರು ದ್ವನಿಯೆತ್ತಿ ಸರಕಾರದ ಮೇಲೆ ಒತ್ತಡ ಹೇರಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರ ನೇತೃತ್ವದ ನಿಯೋಗವು ಇಂದು ಪುತ್ತೂರು ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಯವರನ್ನು ಬೇಟಿಯಾಗಿ ಮನವಿ ಸಲ್ಲಿಸಿದರು. SDPI ಪಕ್ಷದ ವತಿಯಿಂದ ಸಲ್ಲಿಸಿದ ಬೇಡಿಕೆಯನ್ನು ಸೂಕ್ಷ್ಮವಾಗಿ ಅವಲೋಕಿಸಿದ ಶಾಸಕರು ಈ ಬಗ್ಗೆ ಸರಕಾರದ ಗಮನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿ ಮೀಸಲಾತಿ ಗೊಂದಲ ನಿವಾರಣೆ ಮತ್ತು ಅಯೋಗದ ವರದಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಸಂಬಂದಪಟ್ಟವರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದು ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ಶಾಸಕರನ್ನು ಭೇಟಿಯಾದ ನಿಯೋಗದಲ್ಲಿ SDPI ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು , ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್,ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ , ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಅಬ್ದುಲ್ ಹಮೀದ್ ಸಾಲ್ಮರ,ಸಮಿತಿ ಸದಸ್ಯರಾದ ಅಬ್ದುಲ್ ರೆಹಮಾನ್(ರಹೀಂ) ಮತ್ತು ಪುತ್ತೂರು ನಗರಾಧ್ಯಕ್ಷರಾದ ಸಿರಾಜ್ ಕೂರ್ನಡ್ಕ ಮತ್ತು ಇತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *