Visitors have accessed this post 1816 times.
ಮಲ್ಪೆ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ 21 ಮಂದಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಆರೋಪಿಯನ್ನು ಪತ್ತೆ ಹಚ್ಚಿದ ಅನಂತರ ಪೊಲೀಸರು ನ. 16ರಂದು ಆರೋಪಿಯನ್ನು ಸಂತ್ರಸ್ತರ ಮನೆಗೆ ಕರೆ ತಂದಿದ್ದರು. ಅ ವೇಳೆ ಮನೆ ಸಮೀಪದಲ್ಲಿ ಜಮಾಯಿಸಿದ ಸ್ಥಳೀಯರು ಆಕ್ರೋಶಿತಗೊಂಡು ಆರೋಪಿ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಈ ವೇಳೆ ಪರಿಸರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದರೂ, ಉದ್ರಿಕ್ತ ಗುಂಪನ್ನು ಚದುರಿಸಲು ಲಾಠಿ ಚಾರ್ಚ್ ಮಾಡಬೇಕಾಗಿ ಬಂದಿತ್ತು. ಪೊಲೀಸರು ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಆರೋಪಿ ಮೇಲೆ ಹಲ್ಲೆಗೆ ಯತ್ನಿಸಿದವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಈಗಾಗಲೇ ಮೂವರನ್ನು ವಿಚಾರಣೆ ಮಾಡಲಾಗಿದೆ. ಇನ್ನುಳಿದವರನ್ನೂ ಠಾಣೆಗೆ ಕರೆದು ವಿಚಾರಿಸಲಾಗುವುದು ಎಂದು ಮಲ್ಪೆ ಠಾಣಾಧಿಕಾರಿ ತಿಳಿಸಿದ್ದಾರೆ. ಆರೋಪಿಯನ್ನು ಸಂತ್ರಸ್ತರ ನಿವಾಸಕ್ಕೆ ಕರೆ ತಂದಾಗ “ಸ್ಥಳೀಯರು ಆತನ ಕೊಲೆ ಮಾಡುವ ಸುವರ್ಣ ಅವಕಾಶವನ್ನು ಕಳೆದುಕೊಂಡಿದ್ದಾರೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.Related Posts
ಉಡುಪಿ : ಹೃದಯಾಘಾತದಿಂದ ವಿದ್ಯಾರ್ಥಿ ಅಫ್ಕಾರ್ ಸಾವು..!
Visitors have accessed this post 698 times.
ಉಡುಪಿ : ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಫ್ಕಾರ್ (17) ಎಂದು ಗುರುತಿಸಲಾಗಿದೆ. ಪ್ರಥಮ ಪಿಯುಸಿ ಓದುತ್ತಿದ್ದ ಈತನಿಗೆ ಹುಟ್ಟಿನಿಂದಲೂ ಹೃದಯ…
ಬಂಟ್ವಾಳ: ಬಸ್ಸು- ಕಾರು ಢಿಕ್ಕಿ ; ಮೂವರಿಗೆ ಗಾಯ
Visitors have accessed this post 479 times.
ಬಂಟ್ವಾಳ: ಖಾಸಗಿ ಬಸ್ಸು ಹಾಗೂ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಕಾರು ಚಾಲಕ ಹಾಗೂ ಬಸ್ಸಿನ ನಿರ್ವಾಹಕ, ಪ್ರಯಾಣಿಕೆ ಗಾಯಗೊಂಡ ಘಟನೆ ಫೆ.17ರಂದು ಬೆಳಗ್ಗೆ ಕರಿಯಂಗಳ ಗ್ರಾಮದ ಮಂಗಾಜೆಯಲ್ಲಿ…
ನ.11,12ರಂದು ಮುಡಿಪು ಭಾರತೀ ಶಾಲೆ ಅಮೃತ ಮಹೋತ್ಸವ ಸಂಭ್ರಮ
Visitors have accessed this post 390 times.
ಉಳ್ಳಾಲ: ಕುರ್ನಾಡು ಗ್ರಾಮದ ಮುಡಿಪು ಶ್ರೀ ಭಾರತೀ ಶಾಲೆ ಸ್ಥಾಪನೆಯಾಗಿ 75 ವರ್ಷಗಳು ಪೂರ್ಣಗೊಂಡಿದ್ದು, ನ.11 ಹಾಗೂ ನ.12ರಂದು ಅದ್ಧೂರಿಯ ಅಮೃತ ಮಹೋತ್ಸವ ಸಮಾರಂಭ ಅಮೃತ ಭಾರತಿ…