November 8, 2025
WhatsApp Image 2023-12-14 at 8.16.40 AM

ಉಳ್ಳಾಲ : ಹರೇಕಳ ಪಾವೂರು ಬಳಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿಯನ್ನು ಆಧರಿಸಿ, ಉಳ್ಳಾಲ ಪೊಲೀಸ್‌ ಠಾಣೆಯ ಇನ್‌ ಸ್ಪೆಕ್ಟರ್‌ ಬಾಲಕೃಷ್ಣ ನೇತೃತ್ವದ ಪೊಲೀಸರ ತಂಡ, ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಜತೆಗೂಡಿ ಇಂದು ಬೆಳಗ್ಗೆ ದಾಳಿ ನಡೆಸಿ 4 ದೋಣಿಗಳನ್ನು ವಶ ಪಡಿಸಿಕೊಂಡಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ನೇತ್ರಾವತಿ ನದಿಯಿಂದ ನಾಡದೋಣಿಗಳ ಮೂಲಕ ಮರಳು ಸಂಗ್ರಹಿಸಿ ಮಾರಾಟ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿತ್ತು.

About The Author

Leave a Reply