Visitors have accessed this post 347 times.

ಭೀಕರ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ ಸಾವು

Visitors have accessed this post 347 times.

ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ ಮೃತಪಟ್ಟ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ನಡೆದಿದೆ.

ಪರಿಣಾಮ ಕಾರಿನಲ್ಲಿದ್ದ ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ನಜ್ಜು ಗುಜ್ಜಾಗಿದೆ. ಮೃತಪಟ್ಟ ಸಂತೋಷ್ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು.

ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *