Visitors have accessed this post 423 times.
ಬಹರೈನ್ ನಲ್ಲಿ ಕಾರು ಅಪಘಾತಗೊಂಡ ಪರಿಣಾಮ ಸುಳ್ಯ ಮೂಲದ ಕುಟುಂಬವೊಂದು ಗಂಭೀರ ಗಾಯಗೊಂಡು ಮಗು ಮೃತಪಟ್ಟ ಘಟನೆ ವರದಿಯಾಗಿದೆ.
ಸುಳ್ಯ ಮೂಲದ ದೇವಚಳ್ಳ ಗ್ರಾಮದ ಎಲಿಮಲೆ ಮೆತ್ತಡ್ಕ ನಿವಾಸಿ ಅಶ್ರಫ್ ಮೆತ್ತಡ್ಕ ಅವರ ಪುತ್ರ ಮೂರು ವರ್ಷದ ಮಗು ಅಯಾನ್ ಅಬ್ದುಲ್ಲಾ ಅಪಘಾತದಲ್ಲಿ ಮೃತಪಟ್ಟಿದೆ.
ದಂಪತಿಗಳು ಕಾರಿನಲ್ಲಿ ಸಂಚರಿಸುತ್ತಿರುವಾಗ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವ ಅಶ್ರಫ್ ಮತ್ತು ಅವರ ಪತ್ನಿ ಬಹರೈನ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.