Visitors have accessed this post 611 times.
ಮಂಗಳೂರು: ನಟೋರಿಯಸ್ ರೌಡಿಶೀಟರ್ ಆಕಾಶಭವನ ಶರಣ್ ಕಾಲಿಗೆ ಗುಂಡೇಟು ಹೊಡೆದು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಜೆಪ್ಪು ಕುಡ್ಪಾಡಿಯಲ್ಲಿ ಸಾಗುತ್ತಿದ್ದಾಗ ಪೊಲೀಸರು ಬಂಧಿಸಲು ಯತ್ನಿಸಿದ್ದಾರೆ. ಆಗ ಆತ ಪೊಲೀಸರ ಮೇಲೆಯೇ ದಾಳಿಗೆ ಯತ್ನಿಸಿದ್ದ ಎಂದು ಹೇಳಲಾಗಿದೆ. ಆಗ ಪೊಲೀಸರು ಆತನ ಕಾಲಿಗೆ ಫೈರಿಂಗ್ ಮಾಡಿ ಬಂಧಿಸಿದ್ದಾರೆ. ಜ.5ರಂದು ರಾತ್ರಿ ಮಂಗಳೂರಿನ ಸಿಸಿಬಿ ಪೊಲೀಸರು ಕಾವೂರಿನಲ್ಲಿ ರೌಡಿಶೀಟರ್ ಆಕಾಶಭವನ ಶರಣ್ ನನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ ಈತ ಪೊಲೀಸರ ಮೇಲೆಯೇ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದ. ಈ ಬಗ್ಗೆ ಕಾವೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆ ಬಳಿಕ, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಇಂದು ಮಧ್ಯಾಹ್ನ ಶರಣ್ ಜಪ್ಪು ಕುದ್ದಾಡಿಯಲ್ಲಿದ್ದಾನೆಂದು ಖಚಿತ ಮಾಹಿತಿಯ ಮೇರೆಗೆ ವಶಕ್ಕೆ ಪಡೆಯಲು ಮುಂದಾಗಿದ್ದರು. ಆಗ ಈತ ತಪ್ಪಿಸಲು ಪೊಲೀಸರ ಮೇಲೆಯೇ ದಾಳಿಗೆ ಯತ್ನಿಸಿದ್ದಾನೆ. ಆಗ ಸಿಸಿಬಿ ಪಿಎಸ್ಸೈ ಸುದೀಪ್ ರಿಂದ ಆರೋಪಿಯ ಮೇಲೆ ಫೈರಿಂಗ್ ಮಾಡಿದ್ದಾರೆ. ಸದ್ಯ ಗಾಯಾಳು ಆಕಾಶಭವನ ಶರಣ್ ನನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈತನ ಮೇಲೆ ಕೊಲೆ, ಕೊಲೆ ಯತ್ನ, ಫೋಕ್ಸೊ ಸೇರಿದಂತೆ 21ಕ್ಕೂ ಅಧಿಕ ಪ್ರಕರಣಗಳಿದೆ.