Visitors have accessed this post 1269 times.

ಮಂಗಳೂರು: ಸಿಎಂ-ಡಿಸಿಎಂರನ್ನು ಅವಾಚ್ಯವಾಗಿ ನಿಂದಿಸಿದ ಆರೋಪಿ ಅರೆಸ್ಟ್ ..!

Visitors have accessed this post 1269 times.

ಮಂಗಳೂರು : ರಾಜ್ಯದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿಯವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ವೀಡಿಯೋ ಮಾಡಿ ವೈರಲ್ ಮಾಡಿರುವ ಆರೋಪಿಯನ್ನು ಸುರತ್ಕಲ್ ಠಾಣೆಯ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಪ್ರಸ್ತುತ ಕಳೆದ 12 ವರ್ಷಗಳಿಂದ ಸುರತ್ಕಲ್ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿರುವ ಅನಿಲ್ ಕುಮಾರ್(34) ಬಂಧಿತ ಆರೋಪಿ. ಆರೋಪಿ ಅನಿಲ್ ಕುಮಾರ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈತ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿ ನಿಂದಿಸಿ ವೀಡಿಯೋ ಮಾಡಿದ್ದ. ಈ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದ. ಈ ಹಿನ್ನೆಲೆಯಲ್ಲಿ ಎನ್ಎಸ್ ಯುಐ ದ.ಕ.ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರು ಈತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಸುರತ್ಕಲ್ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ವೀಡಿಯೋ ಮಾಡಲು ಕಾರಣ: ಆರೋಪಿ ಅನಿಲ್ ಕುಮಾರ್ ತನ್ನ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸಲು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದ. ಆದರೆ 3 ತಿಂಗಳಿನಿಂದ ಸರ್ವರ್ ಸಮಸ್ಯೆ ಹಾಗೂ ಇತರ ಸಮಸ್ಯೆಗಳಿಂದ ಈತನಿಗೆ ಯಾವುದೇ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ಇದರಿಂದ ಹತಾಶೆಗೊಂಡ ಆರೋಪಿ ವಿಡಿಯೋ ಮಾಡಿ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋವನ್ನು ಅಪ್ಲೋಡ್ ಮಾಡಿದ್ದಾನೆ.

Leave a Reply

Your email address will not be published. Required fields are marked *