Visitors have accessed this post 96 times.

ಬೆಳ್ತಂಗಡಿ : ಟೆಲಿಗ್ರಾಮ್ ಆ್ಯಪ್ ಮೂಲಕ 3.46 ಲಕ್ಷ ರೂ. ವಂಚನೆ – ದೂರು

Visitors have accessed this post 96 times.

ಬೆಳ್ತಂಗಡಿ: ಟೆಲಿಗ್ರಾಮ್ ಆ್ಯಪ್ ಮೂಲಕ ಬಂದ ಮೆಸೇಜ್‌ ನ್ನು ನಂಬಿ ವ್ಯಕ್ತಿಯೊಬ್ಬರು 3.46 ಲಕ್ಷ ರೂ. ಕಳೆದುಕೊಂಡಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ಎಂಬವರಿಗೆ ಟೆಲಿಗ್ರಾಮ್ ಆ್ಯಪ್ ನಲ್ಲಿ ಹಣ ಹೂಡಿಕೆ ಮಾಡಿ ಕಮಿಷನ್ ಪಡೆಯುವಂತೆ ಲಿಂಕ್ ಮತ್ತು ಮೆಸೇಜ್ ಬಂದಿದೆ. ಇದನ್ನು ನಂಬಿದ ಅವರು ಜ.4ರಿಂದ15ರವರೆಗೆ ಅಪರಿಚಿತ ಖಾತೆಗೆ ಕಮಿಷನ್ ಪಡೆಯುವ ಉದ್ದೇಶದಿಂದ ಒಟ್ಟು 3,46,799 ರೂ. ಗಳನ್ನು ಸಂದಾಯ ಮಾಡಿದ್ದಾರೆ. ಹಣ ಪಡೆದ ಬಳಿಕ ಯಾವುದೇ ಕಮಿಷನ್ ನೀಡದೆ ಕೊಟ್ಟ ಹಣವನ್ನೂ ಹಿಂತಿರುಗಿಸದೆ ವಂಚಿಸಿದ್ದಾರೆ. ಈ ಬಗ್ಗೆ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *