Visitors have accessed this post 195 times.
ಬಂಟ್ವಾಳ: ಅಕ್ರಮ ಮರಳು ಸಾಗಾಟದ ಲಾರಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ವಶಕ್ಕೆ ಪಡೆದ ಘಟನೆ ಜ. 25ರಂದು ರಾ.ಹೆ.75ರ ತುಂಬೆಯಲ್ಲಿ ನಡೆದಿದೆ.
ಲಾರಿ ಮಾಲಕ ಸಂತೋಷ್ ಕೋಟ್ಯಾನ್ ಹಾಗೂ ಚಾಲಕ ಪ್ರಕಾಶ್ ಆರೋಪಿಗಳೆಂದು ಗುರುತಿಸಲಾಗಿದೆ.
ಬಂಟ್ವಾಳ ಗ್ರಾಮಾಂತರ ಪಿಎಸ್ಐ ಹರೀಶ್ ಎಂ.ಆರ್. ನೇತೃತ್ವದ ತಂಡ ಮುಂಜಾನೆ 5ರ ಸುಮಾರಿಗೆ ಗಸ್ತು ತಿರುಗುತ್ತಿದ್ದ ವೇಳೆ ಲಾರಿಯೊಂದನ್ನು ತಡೆದು ವಿಚಾರಿಸಿದಾಗ ಅಕ್ರಮ ಮರಳು ಸಾಗಾಟ ಬೆಳಕಿಗೆ ಬಂದಿದೆ. ಪೊಲೀಸರು ಸುಮಾರು 4 ಲಕ್ಷ ರೂ. ಮೌಲ್ಯದ ಲಾರಿ ಮತ್ತು 7 ಸಾವಿರ ರೂ. ಮೌಲ್ಯದ ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.