October 27, 2025
WhatsApp Image 2024-01-29 at 5.58.15 PM

ಪುತ್ತೂರು: ದ್ವಿಚಕ್ರ ವಾಹನ ಮತ್ತು ಟಿಪ್ಪರ್‍ ನಡುವೆ ಅಪಘಾತದಲ್ಲಿ ನೇರಳಕಟ್ಟೆ ಶಾಲಾ ಶಿಕ್ಷಕಿ ಮೃತಪಟ್ಟ ಘಟನೆ ಮುರ ಸಮೀಪದ ಪೋಳ್ಯದಲ್ಲಿ ನಡೆದಿದೆ. ಮೃತಪಟ್ಟವರನ್ನು ಅನಿತಾ ಎಂದು ಗುರುತಿಸಿದ್ದು, ನೇರಳಕಟ್ಟೆ ಶಾಲಾ ಶಿಕ್ಷಕಿ ಎಂದು ಹೇಳಲಾಗಿದೆ. ದ್ವಿಚಕ್ರ ವಾಹನದಲ್ಲಿ ತನ್ನ ಮಗುವಿನೊಂದಿಗೆ ಸಂಚರಿಸುತ್ತಿದ್ದ ಅನಿತಾ ಅವರು, ಟಿಪ್ಪರ್ ಅಡಿಗೆ ಬಿದ್ದು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮಗುವಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಹೇಳಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ತರಲಾಗಿದೆ. ಪುತ್ತೂರು ನಗರ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

About The Author

Leave a Reply