ನೇಣುಬಿಗಿದ ಸ್ಥಿತಿಯಲ್ಲಿ ಚುನಾವಣಾ ಶಾಖಾಧಿಕಾರಿ ಶವ ಪತ್ತೆಯಾಗಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖಾಧಿಕಾರಿ ಸುರೇಶ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಕನಕಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.