Visitors have accessed this post 752 times.
ಉಡುಪಿ : ನಮಾಜ್ ಮಾಡುತ್ತಿರುವ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಉಡುಪಿಯ ಅಂಜುಮನ್ ಮಸೀದಿಯಲ್ಲಿ ನಡೆದಿದೆ. ಮೃತರನ್ನು ದೊಡ್ಡಣಗುಡ್ಡೆ ಕರಂಬಳ್ಳಿ ನಿವಾಸಿ ಮುಸ್ತಾಕ್(55) ಎಂದು ಗುರುತಿಸಲಾಗಿದೆ.
ಮುಸ್ತಾಕ್ ಅವರು ಮಧ್ಯಾಹ್ನ ಜುಮಾ ನಮಾಝ್ಗಾಗಿ ಮಸೀದಿಗೆ ಬಂದಿದ್ದು, ಅಲ್ಲಿ ನಮಾಝ್ ಮಾಡುವ ವೇಳೆ ಹೃದಯಾಘಾತದಿಂದ ಅಲ್ಲೇ ಕುಸಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಈ ಘಟನೆ ಮಸೀದಿಯ ಸಿಸಿಟಿವಿಯಲ್ಲಿ ದಾಖಲಾಗಿದೆ.