Visitors have accessed this post 929 times.
ಬಂಟ್ವಾಳ: ಆರು ತಿಂಗಳ ಗರ್ಭಿಣಿಯಾಗಿ, ಗರ್ಭಸ್ಥ ಶಿಶುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಲೇಡಿಗೋಶನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ತೆಂಕಕಜೆಕಾರು ನಿವಾಸಿ ವಸಂತ ಅವರ ಪತ್ನಿ ಸುಜಾತ(40) ಅವರು ಏಕಾಏಕಿ ಆರೋಗ್ಯ ಏರುಪೇರಾಗಿ ಮೃತಪಟ್ಟ ಘಟನೆ ಫೆ. 14ರ ರಾತ್ರಿ ನಡೆದಿದೆ. ಶಿಶುವಿಗೆ ಹೃದಯ ಸಂಬಂಧಿ ತೊಂದರೆ ಇದೆ ಎನ್ನುವ ಕಾರಣಕ್ಕೆ ಫೆ. 12ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಸುಮಾರು ೧೦ ವರ್ಷಗಳ ಹಿಂದೆ ವಿವಾಹವಾಗಿದ್ದು, ಬಹಳ ಕಾಲ ಮಕ್ಕಳಾಗಿರಲಿಲ್ಲ, ಪ್ರಸ್ತುತ ಚೊಚ್ಚಲ ಗರ್ಭಿಣಿಯಾಗಿದ್ದರು.ಹಲವು ವರ್ಷಗಳ ಕಾಲ ಸರಪಾಡಿ ಗ್ರಾಮ ಕರಣಿಕರ ಕಚೇರಿಯಲ್ಲಿ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದ, ಅವರು ಗ್ರಾಮದಲ್ಲಿ ಚಿರಪರಿಚಿತರಾಗಿದ್ದರು.Related Posts
ಸುರತ್ಕಲ್ : ಜೂಜಾಟ ನಾಲ್ವರ ಬಂಧನ
Visitors have accessed this post 217 times.
ಸುರತ್ಕಲ್: ಜೂಜಾಟವಾಡುತ್ತಿದ್ದ ಆರೋಪದಲ್ಲಿ ನಾಲ್ಕು ಮಂದಿಯನ್ನು ಸುರತ್ಕಲ್ ಪೊಲೀಸರು ತಡಂಬೈಲ್ ಸಮೀಪದ ನಿರ್ಮಿತಿ ಕೇಂದ್ರದ ಬಳಿ ಬಂಧಿಸಿದ್ದಾರೆ. ಆರೋಪಿಗಳನ್ನು ಸ್ಥಳೀಯರಾದ ನಿಂಗಪ್ಪ ಪಾಟೀಲ್, ಶರಣಪ್ಪ ಗುಳಬಾಳ, ಸುನೀಲ್,…
ಫೇಸ್ ಬುಕ್ ನಲ್ಲಿ ಷೇರು ಮಾರುಕಟ್ಟೆಹೂಡಿಕೆ ಜಾಹೀರಾತು ನಂಬಿ 46 ಲಕ್ಷ ರೂ. ಕಳೆದುಕೊಂಡರು
Visitors have accessed this post 195 times.
ಪುತ್ತೂರು : ಫೇಸ್ಬುಕ್ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಬಗ್ಗೆ ಬಂದ ಜಾಹೀರಾತನ್ನು ನಂಬಿ ವ್ಯಕ್ತಿಯೋರ್ವರು 46.1 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ. ಹಣ ಕಳೆದುಕೊಂಡ ಪುತ್ತೂರು ಸಾಲ್ಮರ…
ಮಂಗಳೂರು: 6.19 ಲಕ್ಷ ರೂ. ಅಧಿಕ ಮೌಲ್ಯದ ಅಕ್ರಮ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ವಶ
Visitors have accessed this post 359 times.
ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಪ್ರಯಾಣಿಕರೊಬ್ಬರಿಂದ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮಾರ್ಚ್ 19 ರಂದು ದುಬೈನಿಂದ ಪ್ರಯಾಣಿಸುತ್ತಿದ್ದ ಭಟ್ಕಳ ಮೂಲದ ಪ್ರಯಾಣಿಕರಿಂದ ಕಸ್ಟಮ್ಸ್…