Visitors have accessed this post 279 times.
ಇತ್ತೀಚಿಗೆ ಬೀದಿ ನಾಯಿಗಳ ಹಾವಳಿ ಅಧಿಕವಾಗುತ್ತಿದ್ದು ಮಕ್ಕಳು ಶಾಲೆಗೆ ಹೋಗಲು ಭಯಪಡುವಂತ ವಾತಾವರಣ ನಿರ್ಮಾಣ ವಾಗಿದ್ದು ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಂಡು ಬೀದಿ ನಾಯಿಗಳ ಹಾವಳಿಯಿಂದ ಪ್ರತಿಯೊಬ್ಬರನ್ನು ರಕ್ಷಿಸುವಂತೆ ಖ್ಯಾತ ಚಿಂತಕ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಸದಸ್ಯರು ಹಾಗೂ ಮಾನವ ಹಕ್ಕು ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆಯ ರಾಜ್ಯ ಕಾರ್ಯದರ್ಶಿ ಕಮರುದ್ದಿನ್ ಸಾಲ್ಮರ ಮನವಿ ಮಾಡಿದ್ದಾರೆ. ಒಂದು ವೇಳೆ ಮನವಿಗೆ ಸ್ಪಂದಿಸದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುದೆಂದು ಅವರು ಎಚ್ಚರಿಸಿದ್ದಾರೆ.