Visitors have accessed this post 287 times.

 ಮೂಡಬಿದ್ರೆ: ಫ್ಲೆಕ್ ಹಾನಿಗೊಳಿಸಿದ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ..!

Visitors have accessed this post 287 times.

ಮೂಡಬಿದ್ರೆಯಲ್ಲಿ ಭಾನುವಾರ ನಡೆಯಲಿರುವ ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಆಗಮಿಸುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸ್ವಾಗತ ಕೋರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರು ಮೂಡಬಿದಿರೆ ಪರಿಸರದಲ್ಲಿ ಹಾಕಿದ ಫ್ಲೆಕ್ಸ್‌ ಅನ್ನು ಹಾನಿಗೊಳಿಸಿದ ಘಟನೆ ನಡೆದಿದೆ.

ಮೂಡಬಿದಿರೆ ವಿದ್ಯಾಗಿರಿ ಬಳಿ ಹಾಕಲಾಗಿದ್ದ ಫ್ಲೆಕ್ಸ್ ನಲ್ಲಿ ಮಿಥುನ್ ರೈಯವರ ಭಾವಚಿತ್ರವಿದ್ದ ಭಾಗವನ್ನೇ ಹರಿದುಹಾಕಲಾಗಿದೆ. ಈ ಬಗ್ಗೆ ಮೂಡುಬಿದಿರೆ ಠಾಣೆಗೆ ದೂರು ನೀಡಿರುವ ಕಾಂಗ್ರೆಸ್ ಮುಖಂಡರು ಫ್ಲೆಕ್ಸ್ ಹರಿದಿರುವ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *