Visitors have accessed this post 231 times.
ಕಾಪು: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟ್ ನಿಂದ ಸಮುದ್ರಕ್ಕೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಉಳಿಯಾರಗೋಳಿ ಗ್ರಾಮದ ಪೊಲಿಪು ಎಂಬಲ್ಲಿ ಸಂಭವಿಸಿದೆ. ಮೃತರನ್ನು ಉದ್ಯಾವರ ಪಿತ್ರೋಡಿಯ ರಾಮಾಜು(54) ಎಂದು ಗುರುತಿಸಲಾಗಿದೆ. ಇವರು ಮಧ್ಯಾಹ್ನ ಇತರ ಮೀನುಗಾರರೊಂದಿಗೆ ಬೋಟಿನಲ್ಲಿ ಮೀನುಗಾರಿಕೆಗೆ ತೆರಳಿದ್ದು, ಮೀನಿಗೆ ಹಾಕಿದ ಬಲೆಯನ್ನು ಮೇಲಕ್ಕೆ ಎಳೆಯುತ್ತಿದ್ದ ವೇಳೆ ರಾಮಾಜು ಬಲೆಯೊಂದಿಗೆ ಬೋಟ್ನಿಂದ ನೀರಿಗೆ ಬಿದ್ದಿದ್ದಾರೆ. ಇದರಿಂದ ಅಸ್ವಸ್ಥಗೊಂಡ ಇವರು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.