Visitors have accessed this post 493 times.
ವಿಟ್ಲ: ನಿರ್ಜನ ಪ್ರದೇಶದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ವಿಟ್ಲ ಕಸಬಾ ಗ್ರಾಮದ ದೇವಸ್ಯ ಎಂಬಲ್ಲಿ ಪತ್ತೆಯಾಗಿದ್ದು ವ್ಯಕ್ತಿಯ ಗುರುತು ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಕೊಡಂಗಾಯಿ ಕಾಪುಕೋಡಿ ನಿವಾಸಿ ಚಂದ್ರಶೇಖರ ಎಂದು ಗುರುತಿಸಲಾಗಿದೆ. ವಿಟ್ಲ ಕಸಬಾ ಗ್ರಾಮದ ದೇವಸ್ಯ ನಿರ್ಜನ ಪ್ರದೇಶದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವವೊಂದು ಕೊಳೆತ ಸ್ಥಿತಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ಪತ್ತೆಯಾಗಿದ್ದು, ಸುಮಾರು ನಾಲ್ಕೈದು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ಘಟನಾ ವಿಟ್ಲ ಪೊಲೀಸರು ಹಾಗೂ ಮುರಳೀಧರ ವಿಟ್ಲ ನೇತೃತ್ವದ ಫ್ರೆಂಡ್ಸ್ ವಿಟ್ಲ ತಂಡ ಆಗಮಿಸಿ ಮೃತದೇಹವನ್ನು ಕೆಳಕ್ಕಿಳಿಸುವ ಕಾರ್ಯ ಮಾಡಿದ್ದರು. ಇದೀಗ ಮೃತ ದೇಹದ ಗುರುತು ಪತ್ತೆಹಚ್ಚಲಾಗಿದೆ