Visitors have accessed this post 1176 times.
ಚಿಕ್ಕಮಗಳೂರು ತಾಲೂಕಿನ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಶೋಲಾ ಅರಣ್ಯದಲ್ಲಿ ಕಾಡ್ಗಿಚ್ಚಿಗೆ ಹುಲ್ಲುಗಾವಲು ಹೊತ್ತಿ ಉರಿದಿರುವಂತಹ ಘಟನೆ ನಡೆದಿದೆ.
ಉರುಸ್ ಆಚರಣೆ ವೇಳೆ ಟೆಂಟ್ ಹಾಕಿ ಅಡುಗೆ ಮಾಡುವಾಗ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಆಕಸ್ಮಿಕ ಬೆಂಕಿಯಿಂದ 2 ಟೆಂಟ್ ಭಸ್ಮವಾಗಿದೆ. ಬೆಂಕಿ ನಂದಿಸಲು ಸ್ಥಳೀಯರಿಂದ ಹರಸಾಹಸ ಮಾಡಲಾಯಿತು.
ಸೂಕ್ಷ್ಮ ಪ್ರದೇಶದಲ್ಲಿ ಅಡುಗೆ ತಯಾರಿ ಮಾಡದಂತೆ ಜಿಲ್ಲಾಡಳಿತ ಸೂಚನೆ ಇದ್ದರೂ ಧಿಕ್ಕರಿಸಿ ಅಡುಗೆ ತಯಾರು ಮಾಡಲಾಗಿದೆ.