Visitors have accessed this post 182 times.
ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ದರ್ಬೆ ಬೈಪಾಸ್ ಜಂಕ್ಷನಿನ ಆರ್.ಸಿ.ಬಿ. ಎನ್’ಕ್ಲೇವ್’ನಲ್ಲಿ ಉದ್ಘಾಟನೆಗೊಂಡಿತು.
ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಶಾಸಕ ಅಶೋಕ್ ಕುಮಾರ್ ರೈ, ಅಭ್ಯರ್ಥಿ ಪದ್ಮರಾಜ್ ಆರ್. ಕಚೇರಿಯನ್ನು ಉದ್ಘಾಟಿಸಿದರು.
ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ನೈಋತ್ಯ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ. ವಿಶ್ವನಾಥ ರೈ, ಡಾ. ರಾಜಾರಾಮ್, ಎಂ.ಎಸ್. ಮಹಮ್ಮದ್, ಮಹಮ್ಮದ್ ಆಲಿ, ಮಹಮ್ಮದ್ ಬಡಗನ್ನೂರು, ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜಾ, ಶ್ರೀಪ್ರಸಾದ್ ಪಾಣಾಜೆ, ರಮಾನಾಥ್ ವಿಟ್ಲ, ನವೀನ್ ರೈ, ಫಾರೂಕ್ ಪೆರ್ನೆ, ಶ್ರೀನಿವಾಸ್ ವಿಟ್ಲ ಮೊದಲಾದವರು ಉಪಸ್ಥಿತರಿದ್ದರು.