Visitors have accessed this post 94 times.

ಮಂಗಳೂರು: ಪತ್ನಿಯನ್ನು ಹತ್ಯೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ

Visitors have accessed this post 94 times.

ಮಂಗಳೂರು: ನಾಲ್ಕು ವರ್ಷದ ಹಿಂದೆ ಕಾವೂರಿನ ಬಾಡಿಗೆ ಮನೆಯಲ್ಲಿ ಪತ್ನಿಯನ್ನು ಹತ್ಯೆಗೈದ ಆರೋಪಿ ಪತಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮೂಲತಃ ಹಾಸನ ಅರಕಲಗೂಡಿನ, ಕಾವೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಗಣೇಶ್ ಕುಮಾರ್ (46) ಶಿಕ್ಷೆಗೊಳಗಾದ ಆರೋಪಿ. ಈತ ತನ್ನ ಪತ್ನಿಗೆ ದಿನನಿತ್ಯ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದ ಎಂಬ ಆರೋಪವಿತ್ತು. 2020ರ ಜು.1ರಂದು ಸಂಜೆ ಸಾಮಾನು ತರಲಿಕ್ಕಿದೆ ಎಂದು ಹೇಳಿ ಪತ್ನಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದ.

ರಾತ್ರಿ 7ರಿಂದ 7:20ರ ಮಧ್ಯೆ ಅಂತೋನಿಕಟ್ಟೆ ಎಂಬಲ್ಲಿ ಪತ್ನಿಯ ಕುತ್ತಿಗೆ ಹಿಸುಕಿ ಕಪ್ಪು ಕಲ್ಲಿನ ಕೋರೆಯ ಮೇಲಿನಿಂದ ದೂಡಿ ಹಾಕಿ ಹತ್ಯೆ ಮಾಡಿದ್ದಮತ್ತು ಪತ್ನಿಯ ತಾಯಿಗೆ ಜೀವಬೆದರಿಕೆ ಹಾಕಿದ್ದ ಎಂದು ದೂರು ದಾಖಲಾಗಿತ್ತು. ಪ್ರಕರಣದ ಬಗ್ಗೆ ಕಾವೂರು ಠಾಣೆಯ ಇನ್ಸ್ಪೆಕ್ಟರ್ ರಾಘವ ಎಸ್. ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತ ರಾಜು ಎಸ್.ವಿ. ವಿಚಾರಣೆ ನಡೆಸಿ ಆರೋಪಿಯ ಮೇಲಿನ ಆರೋಪ ಸಾಬೀತಾಗಿದ್ದರಿಂದ ಸೋಮವಾರ ಭಾರತೀಯ ದಂಡ ಸಂಹಿತೆಯ ಕಲಂ 302ರ ಅಪರಾಧಕ್ಕೆ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ, ಭಾರತೀಯ ದಂಡ ಸಂಹಿತೆ ಕಲಂ 498 (ಎ)ರ ಅಪರಾಧಕ್ಕೆ 3 ವರ್ಷ ಕಠಿಣ ಶಿಕ್ಷೆ ಮತ್ತು 25,000 ರೂ. ದಂಡ, ಭಾರತೀಯ ದಂಡ ಸಂಹಿತೆ ಕಲಂ 506ರ ಅಪರಾಧಕ್ಕೆ 2 ವರ್ಷ ಕಠಿಣ ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ಸಂತ್ರಸ್ತರಿಗೆ ಪರಿಹಾರ ನೀಡಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಸರಕಾರಿ ಅಭಿಯೋಜಕರಾದ ಜ್ಯೋತಿ ಪ್ರಮೋದ ನಾಯಕ ಮತ್ತು ಬಿ.ಶೇಖರ ಶೆಟ್ಟಿ ಚೌಧರಿ ಮೋತಿಲಾಲ ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *