Visitors have accessed this post 497 times.
ಉಡುಪಿ: ಖಾಸಗಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಶನಿವಾರ ಸಂಜೆ ನಡೆದಿದೆ.
ಮೃತರು ಬಾಗಲಕೋಟೆ ನಿವಾಸಿ ಎಂದು ತಿಳಿದು ಬಂದಿದ್ದು, ಬಸ್ ಉಡುಪಿಯಿಂದ ಕರಾವಳಿ ಬೈಪಾಸ್ ಮಾರ್ಗವಾಗಿ ಸಂತೆಕಟ್ಟೆಯತ್ತ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದ ಬಳಿಕ ಕೆಲ ಕಾಲ ಸಂಚಾರ ದಟ್ಟಣೆ ಉಂಟಾಯಿತು. ಉಡುುಪಿ ಜಿಲ್ಲೆಯಲ್ಲಿ ಇತ್ತೀಚೆಗೆ ರಸ್ತೆ ಅಪಘಾತ ದಿನವೂ ಸಂಭವಿಸುತ್ತಿದ್ದು, ಸವಾರರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.