October 22, 2025
WhatsApp Image 2024-04-26 at 9.15.39 AM

ಸುಳ್ಯ : ಎಂಡಿಎಂಎಯನ್ನು ಕಳ್ಳ ಸಾಗಟಕ್ಕೆ ಯತ್ನಿಸಿದ ದಕ್ಷಿಣ ಕನ್ನಡದ ಸುಳ್ಯದ ಇಬ್ಬರು ಯುವಕರನ್ನು ಕೇರಳ ಅಬಕಾರಿ ಪೋಲಿಸರು ಬಂಧಿಸಿದ್ದಾರೆ.ಆರೋಪಿಗಳು ಬೆಂಗಳೂರಿನಿಂದ 1. 5 ಲಕ್ಷ ರೂ.ಗೆ ಖರೀದಿಸಿದ್ದ ಎಂಡಿಎಂಎಯನ್ನು ಮಲಪ್ಪುರಂಗೆ ತಲುಪಿಸುವ ಗುರಿಯನ್ನು ಹೊಂದಿದ್ದರು ಎನ್ನಲಾಗಿದೆ. ಮಾನಂದವಾಡಿ ಅಬಕಾರಿ ವೃತ್ತ ನಿರೀಕ್ಷಕ ಎ ಪ್ರಜಿತ್ ನೇತೃತ್ವದ ತಂಡವು ಕೇರಳ ಮಾನಂದವಾಡಿಯಲ್ಲಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅಲೆಟ್ಟಿ ಗ್ರಾಮದ ನಿವಾಸಿಗಳಾದ ಉಮ್ಮರ್ ಫಾರೂಕ್ (33) ಮತ್ತು ಎ.ಎಚ್.ಸಿದ್ದೀಕ್ ಎಂಬುವರನ್ನು ಬಂಧಿಸಿದ್ದಾರೆ.ಆರೋಪಿಗಳು ಬೆಂಗಳೂರಿನಿಂದ ಖರೀದಿಸಿದ್ದ ಎಂಡಿಎಂಎ ಯನ್ನು ಮಲಪ್ಪುರಂಗೆ ತಲುಪಿಸುವ ಗುರಿ ಹೊಂದಿದ್ದರು ಎನ್ನಲಾಗಿದೆ.ಎಂಡಿಎಂಎಯನ್ನು ಪ್ರತಿ ಗ್ರಾಂಗೆ 4000 ರೂ.ಗೆ ಮಾರಾಟ ಮಾಡಲು ಕಳ್ಳಸಾಗಣೆ ಮಾಡಲಾತ್ತು. ಆರೋಪಿಗಳು ಎಂಡಿಎಂಎ ಕಳ್ಳಸಾಗಣೆ ಮಾಡಲು ಬಳಸಿದ ಸ್ವಿಫ್ಟ್ ಡಿಸೈರ್ ಕಾರನ್ನು ಅಬಕಾರಿ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ .

About The Author

Leave a Reply