Visitors have accessed this post 537 times.
ಉಪ್ಪಿನಂಗಡಿ: ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಮುದ್ರಿತವಾದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ “ಈ ಬಾರಿಯೂ ಮೋದಿ ಅವರನ್ನು ಪ್ರಧಾನಿ ಮಾಡುವುದೇ ವಧು-ವರರಿಗೆ ನೀಡುವ ಉಡುಗೊರೆ” ಎಂದು ಮುದ್ರಿಸಿದ ವರನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಶಿವಪ್ರಸಾದ್ ಎಂಬುವವರ ಮದುವೆ ಏಪ್ರಿಲ್ 18ರಂದು ನೆರವೇರಿದೆ. ಮಾರ್ಚ್ 1ರಂದು ಮದುವೆಯ ಆಮಂತ್ರಣ ಪತ್ರ ಮುದ್ರಿಸಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದುಕೊಂಡ ಚುನಾವಣಾ ನೀತಿ ಸಂಹಿತೆ ಜಾರಿ ನಿಗಾ ತಂಡದ ಅಧಿಕಾರಿಗಳು ಏಪ್ರಿಲ್ 14ರಂದು ವರನ ಮನೆಗೆ ಭೇಟಿ ನೀಡಿ ವಿಚಾರಿಸಿದ್ದಾರೆ. ಇದು ನೀತಿ ಸಂಹಿತೆ ಉಲ್ಲಂಘನೆ ಅಲ್ಲ, ಮೋದಿಯವರ ಮೇಲಿನ ಪ್ರೀತಿ ಮತ್ತು ದೇಶದ ಮೇಲಿನ ಕಾಳಜಿಯಿಂದ ಈ ರೀತಿ ಮುದ್ರಿಸಿರುವುದಾಗಿ ಶಿವಪ್ರಸಾದ್ ಲಿಖಿತ ಹೇಳಿಕೆ ನೀಡಿದ್ದಾರೆ. ಮತದಾನದ ನಂತರ ಅಧಿಕಾರಿಗಳು ಈ ಬಗ್ಗೆ ದೂರು ದಾಖಲಿಸಿದ್ದು, ಶನಿವಾರ ಆಮಂತ್ರಣ ಪತ್ರಿಕೆ ಮುದ್ರಣ ಮಾಡಿದವರನ್ನು ಕೂಡ ಕರೆಸಿ ವಿಚಾರಿಸಲಾಗಿದೆ.ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಗೆಲ್ಲಿಸುವಂತೆ ಮುದ್ರಿಸಿದಕ್ಕೆ ಕೇಸ್ ದಾಖಲು
![](https://mediaonekannada.com/wp-content/uploads/2024/04/WhatsApp-Image-2024-04-28-at-9.40.21-AM.jpeg)