Visitors have accessed this post 446 times.
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆದ ಬೆನ್ನಲ್ಲೇ ಇದೀಗ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕಾಂತೇಶ್ ಅವರಿಗೂ ಅಶ್ಲೀಲ ಸಿಡಿ ಸಂಕಷ್ಟ ಎದುರಾಗಿದ್ದು, ಈ ಹಿನ್ನಲೆ ಕಾಂತೇಶ್ ಮಾಧ್ಯಮಗಳಿಗೆ ನಿರ್ಬಂಧ ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದು, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ನಿರ್ಬಂಧಕಾಜ್ಞೆ ಹೊರಡಿಸಿದೆ.
ಲೋಕಸಭೆ ಚುನಾವಣೆ ವೇಳೆ ತಮ್ಮ ಹೆಸರಿಗೆ ಮಸಿ ಬಳಿಯುವ ಯತ್ನ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತವಾಗಿ ಕಾಂತೇಶ್ ಅವರು ಮಾಧ್ಯಮಗಳಲ್ಲಿ ಮಾನಹಾನಿಕರ ದೃಶ್ಯ ಪ್ರಸಾರಕ್ಕೆ ನಿರ್ಬಂಧ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಗಣಿಸಿದ ಕೋರ್ಟ್, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ಹೊರಡಿಸಿದೆ.