Visitors have accessed this post 465 times.
ಮಂಗಳೂರು: ನಗರದಲ್ಲಿ ಮಹಿಳೆಯೊಬ್ಬರು ಬೈಕಿನಿಂದ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸಂಭವಿಸಿದೆ.
ಸಾವನ್ನಪ್ಪಿದವರು ಗೋರಿಗುಡ್ಡ ನಿವಾಸಿ ಕವಿತಾ (30) ಎಂದು ತಿಳಿಯಲಾಗಿದೆ.
ರಾತ್ರಿ ಅಭಿಷೇಕ್ ಅವರು ಕವಿತಾ ಹಾಗೂ ನವ್ಯಾ (15) ಅವರನ್ನು ಪಲ್ಸರ್ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಬಂದು ಗೋರಿಗುಡ್ಡ ವೆಲೆನ್ಸಿಯಾ ಚರ್ಚ್ ರಸ್ತೆಯಲ್ಲಿರುವ ತರಕಾರಿ ಅಂಗಡಿಯಿಂದ ಎಳನೀರು ಖರೀದಿಸಿದ್ದರು. ಬಳಿಕ ಅಲ್ಲಿಂದ ಮನೆಯ ಕಡೆಗೆ ಹೋಗುತ್ತಿದ್ದಾಗ ಕವಿತಾ ರಸ್ತೆಗೆ ಬಿದ್ದರು. ಅವರನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಕದ್ರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Post Views: 497