Visitors have accessed this post 806 times.
ಬೆಂಗಳೂರು: ಪ್ರಧಾನ ಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ಭವನಕ್ಕೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ ಪ್ರಧಾನಿ ಮೋದಿ ಅವರು 17ನೇ ಲೋಕಸಭೆಯನ್ನು ವಿಸರ್ಜಿಸುವಂತೆ ಮನವಿ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಚಿವರ ರಾಜೀನಾಮೆ ಪತ್ರವನ್ನು ಸ್ವೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕಾರ ಮಾಡಿದರು. ರಾಜೀನಾಮೆ ಪತ್ರ ನೀಡುವುದರೊಂದಿಗೆ 17ನೇ ಲೋಕಸಭೆಯನ್ನು ವಿಸರ್ಜಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರಧಾನಿ ಮೋದಿ ಮನವಿ ಮಾಡಿದರು.