Visitors have accessed this post 124 times.
ಮೈಸೂರು : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತದಾರರು ಬಿಜೆಪಿ ಬೆಂಬಲಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ವಿರುದ್ಧ ಮತ ಚಲಾಯಿಸಿದ್ದಾರೆ. ಹೀಗಾಗಿ ಈ ಯೋಜನೆಗಳನ್ನು ನಿಲ್ಲಿಸುವುದು ಒಳ್ಳೆಯದು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ. ಲಕ್ಷ್ಮಣ ಹೇಳಿದರು. ಜನ ಬಿಜೆಪಿ ಪರ ಮತ ಚಲಾಯಿಸಿದ್ದಾರೆ ಎಂದರೆ ಗ್ಯಾರಂಟಿ ವಿರುದ್ಧವಾಗಿ ಇದ್ದಾರೆ ಎಂದರ್ಥ. ಹೀಗಾಗಿ ಪಂಚ ಗ್ಯಾರಂಟಿ ಯೋಜನೆಗಳ ಜಾರಿ ಸಂಬಂಧ ಪುನರಾವಲೋಕನಕ್ಕೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಗುವುದು ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.