Visitors have accessed this post 361 times.
ಬೆಂಗಳೂರು: ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾ ತಂಡಕ್ಕೆ ಮತ್ತೆ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಸೇರ್ಪಡೆಗೊಂಡಿದ್ದಾರೆ. ಪ್ರಕರಣದ ಎ2 ಆರೋಪಿ ದರ್ಶನ್ ಅವರನ್ನು ಎಸಿಪಿ ಚಂದನ್ ಮತ್ತು ಗಿರೀಶ್ ನಾಯ್ಕ್ ಮೈಸೂರಿನಿಂದ ಕರೆತಂದಿದ್ದರು. ಗಿರೀಶ್ ನಾಯ್ಕ್ ಅವರು ಮೊದಲು ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಕಾಧಿಕಾರಿಯಾಗಿದ್ದರು. ಅವರು ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದ್ದರು. ಇದೇ ವೇಳೆ ರೇಣುಕಾಸ್ವಾಮಿ ಮರ್ಡರ್ ನಡೆದಿತ್ತು. ಬಳಿಕ ಮತ್ತೆ ಗಿರೀಶ್ ಅವರು ಸಿ.ಕೆ ಅಚ್ಚು ಕಟ್ಟು ಪೊಲೀಸ್ ಠಾಣೆಗೆ ವರ್ಗಾವಣೆ ಗೊಂಡಿದ್ದರು. ಹೀಗಾಗಿ ಎಸಿಪಿ ಚಂದನ್ ಅವರನ್ನು ತನಿಖಾಧಿಕಾರಿಯಾನ್ನಾಗಿ ನೇಮಕ ಮಾಡಲಾಗಿತ್ತು. ಆರೋಪಿಗಳ ಹೆಚ್ಚಿನ ವಿಚಾರಣೆ ಅಗತ್ಯ ಹಿನ್ನಲೆ ಮತ್ತೆ ಗಿರೀಶ್ ನಾಯ್ಕ್ ಅವರನ್ನು ಸಹಾಯಕ ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ.