Visitors have accessed this post 467 times.

ಕಾಸರಗೋಡು: ಅವಳಿ ಬಾಲಕರಿಬ್ಬರು ನೀರುಪಾಲು

Visitors have accessed this post 467 times.

ಕಾಸರಗೋಡು: ಅವಳಿ ಸಹೋದರರಿಬ್ಬರು ಕಲ್ಲಿನ ಕ್ವಾರಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಚೀಮೇನಿ ಕನಿಯಾಂದಲದಲ್ಲಿ ನಡೆದಿದೆ.ಚೀಮೇನಿ ಕನಿಯಾಂದಲದಲ್ಲಿ ರಾಧಾಕೃಷ್ಣ ರವರ ಮಕ್ಕಳಾದ ಸುದೇವ್ ( 10) ಮತ್ತು ಶ್ರೀದೇವಿ ( 10) ಮೃತಪಟ್ಟವರು. ಚೀಮೇನಿ ಸರಕಾರಿ ಹಯರ್ ಸೆಕಂಡರಿ ಶಾಲೆಯ ಐದನೇ ತರಗತಿ ಯ ವಿದ್ಯಾರ್ಥಿಗಳಾಗಿದ್ದರು. ‘ಸಂಜೆ ಸುಮಾರು ಆರು ಗಂಟೆ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ.ಮಧ್ಯಾಹ್ನ ಇಬ್ಬರೂ ಸೈಕಲ್ ನಲ್ಲಿ ಆಟವಾಡಲು ತೆರಳಿದ್ದು , ತಡವಾದರೂ ಆಗಮಿಸದ ಹಿನ್ನಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದಾಗ ಕ್ವಾರಿಯ ಸಮೀಪ ಸೈಕಲ್ ಪತ್ತೆಯಾಗಿದೆ. ಸಂಶಯಗೊಂಡು ಮನೆಯವರು ಹಾಗೂ ಪರಿಸರವಾಸಿಗಳು ಶೋಧ ನಡೆಸಿದಾಗ ಕ್ವಾರಿಗೆ ಬಿದ್ದಿರುವುದು ಕಂಡುಬಂದಿದೆ.ಇಬ್ಬರನ್ನು ಮೇಲಕ್ಕೆತ್ತಿ ಸಮೀಪದ ಆಸ್ಪತ್ರೆಗೆ ತಲಪಿಸಿದರೂ ಇಬ್ಬರೂ ಮೃತಪಟ್ಟಿದ್ದರು.ಮೃತದೇಹವನ್ನು ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ

Leave a Reply

Your email address will not be published. Required fields are marked *