Visitors have accessed this post 214 times.
ಬೆಳ್ತಂಗಡಿ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ, ನಡ ಗ್ರಾಮ ಕರಣಿಕರ ಕಚೇರಿ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಲಾಯಿಲದಲ್ಲಿ ಇಂದು ಬೆಳಗ್ಗೆ ನಡೆಸಿದೆ.
ಬಳಂಜ ನಿವಾಸಿ, ನಡ ಗ್ರಾಮದ ಕರಣಿಕರ ಕಚೇರಿ ಸಹಾಯಕ ಜಯರಾಜ್ (45) ಮೃತ ದುರ್ದೈವಿ.
ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಬೆಳ್ತಂಗಡಿ ಕಡೆಯಿಂದ ನಡಕ್ಕೆ ತೆರಳುತ್ತಿದ್ದ ಬೈಕ್ ನಡುವೆ ಪುತ್ರಬೈಲು ಎಂಬಲ್ಲಿ ಅಪಘಾತ ಉಂಟಾಗಿದೆ. ಅಪಘಾತದ ರಭಸಕ್ಕೆ ಜಯರಾಜ್ ಅವರು ತೀವ್ರ ಗಾಯಗೊಂಡಿದ್ದು, ಆತ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಸಾವನ್ನಪ್ಪಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.