Visitors have accessed this post 747 times.

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ- ಉದ್ಯಮಿಯ ಪುತ್ರ ದಾರುಣ ಸಾವು

Visitors have accessed this post 747 times.

ಬೆಳ್ತಂಗಡಿ: ತಾಲೂಕಿನ ಉಜಿರೆಯಲ್ಲಿ ಶನಿವಾರ ನಸುಕಿನ ಜಾವ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ ಉದ್ಯಮಿಯ ಪುತ್ರ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಉದ್ಯಮಿ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕ ಎಂ ಆರ್ ನಾಯಕ್ ಪುತ್ರ ಪ್ರಜ್ವಲ್ ಮೃತಪಟ್ಟ ದುರ್ದೈವಿ.

ಇಂದು ಬೆಳಗ್ಗಿನ ಜಾವ ಪ್ರಜ್ವಲ್ ತಮ್ಮ ಬೆಂಜ್ ಕಾರಿನಲ್ಲಿ ಸಂಚಾರ ಮಾಡುತ್ತಿದ್ದರು. ಉಜಿರೆ ತಲುಪುತ್ತಿದ್ದಂತೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಡಿವೈಡರ್ ಹಾರಿ ಪಕ್ಕದ ರಸ್ತೆಗೆ ಉರುಳಿ ಬಿದ್ದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಜ್ವಲ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಪ್ರಜ್ವಲ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *