November 8, 2025
WhatsApp Image 2024-07-22 at 3.42.34 PM

ಬೆಂಗಳೂರು : ಕಳೆದ ಜುಲೈ 17 ರಂದು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ ಗೆ ರೈತ ಫಕೀರಪ್ಪಗೆ ಪಂಚೇ ಧರಿಸಿದ್ದಾನೆ ಎಂದು ಮಾಲ್ ಒಳಗಡೆ ಪ್ರವೇಶ ನಿರಾಕರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ಫಕೀರಪ್ಪ ಕುಟುಂಬ ಸ್ಪೀಕರ್ ಯುಟಿ ಖಾದರ್ ಅವರನ್ನು ಭೇಟಿ ಮಾಡಿದರು.ಈ ವೇಳೆ ಸ್ಪೀಕರ್ ಯುಟಿ ಖಾದರ್ ಅವರು ಫಕೀರಪ್ಪ ಅವರನ್ನು ಸನ್ಮಾನಿಸಿ ಗೌರವಿಸಿದರು.

 

ಹೌದು ಜುಲೈ 17 ರಂದು ರೈತ ಫಕೀರಪ್ಪಗೆ ಜಿಟಿ ಮಾಲ್ ಪ್ರವೇಶಕ್ಕೆ ಬಿಟ್ಟಿರಲಿಲ್ಲ. ಹೀಗಾಗಿ ಪಂಚೇ ಧರಿಸಿ ಬಂದಿದ್ದಕ್ಕೆ ಸೆಕ್ಯೂರಿಟಿ ಗಾರ್ಡ್ ಪ್ರವೇಶ ನಿರಾಕರಿಸಿದ್ದ. ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್ ಗೆ ಪ್ರವೇಶವನ್ನು ನಿರಾಕರಿಸಿದ್ದರು. ನಂತರ ಜಿಟಿ ವರ್ಲ್ಡ್ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕಿದ್ದರು.

ಘಟನೆ ನಡೆದ ನಂತರ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿಸಿದರು. ಹಾಗಾಗಿ ಇಂದು ಫಕೀರಪ್ಪ ಕುಟುಂಬ ಸಮೇತ ವಿಧಾನಸೌಧದಲ್ಲಿ ಸ್ಪೀಕರ್ ಯುಟಿ ಖಾದರ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಸ್ಪೀಕರ್ ಯುಟಿ ಖಾದರ್ ಅವರು ಫಕೀರಪ್ಪ ಅವರನ್ನು ಸನ್ಮಾನಿಸಿ ಗೌರವಿಸಿದರು.

About The Author

Leave a Reply