October 13, 2025
WhatsApp Image 2024-08-19 at 9.07.04 AM

ಬಾಗಲಕೋಟೆಯಲ್ಲಿ ಮಸೀದಿ ಮೌಲಾನಾ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ. ನವನಗರ ಸೆಕ್ಟರ್ 4 ರಲ್ಲಿ ಟೀ ಕುಡಿಯುತ್ತಿದ್ದ ಸಂದರ್ಭದಲ್ಲಿ ಹಲ್ಲೆ ನಡೆಸಲಾಗಿದೆ.

ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ನವನಗರ ಠಾಣೆ ಎದುರು ಮುಸ್ಲಿಂ ಸಮುದಾಯದವರು ಜಮಾವಣೆಗೊಂಡಿದ್ದಾರೆ.

ಹಲ್ಲೆಕೋರರ ಮೇಲೆ ಕೂಡಲೇ ಕೇಸು ದಾಖಲೆಸಿ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಪೊಲೀಸರು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ಮುಸ್ಲಿಂ ಸಮುದಾಯದವರ ಮನವೊಲಿಸಿದ್ದಾರೆ.

ಗಣೇಶ್, ಕಾರ್ತಿಕ್, ಶಿವು, ಆದಿತ್ಯ ಸೇರಿ ಹಲವರ ವಿರುದ್ಧ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಕಾರ್ತಿಕ್ ಮತ್ತು ಪ್ರೀತಮ್ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಮುಖ ಆರೋಪಿ ನಾಗರಾಜನಿಗಾಗಿ ಶೋಧ ಮುಂದುವರೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

About The Author

Leave a Reply