Visitors have accessed this post 81 times.

ಮಂಗಳೂರು: ರಾಷ್ಟೀಯ ಸೇವಾ ಯೋಜನೆಯಿಂದಾಗಿ ಸಮಾಜ ಸೇವೆಗೆ ಒಲವು

Visitors have accessed this post 81 times.

ಮಂಗಳೂರು: ರಾಷ್ಟೀಯ ಸೇವಾ ಯೋಜನೆಯಿಂದ ವಿದ್ಯಾರ್ಥಿ ಯುವ ಸಮೂಹ ಆತ್ಮ ವಿಶ್ವಾಸದ ಜೊತೆಗೆ ಸಮಾಜಕ್ಕೆ ಒಳಿತಾಗುವ ಕೆಲಸವನ್ನು ಶ್ರದ್ದೆ, ಪ್ರಾಮಾಣಿಕತೆ, ಮತ್ತು ನಿಷ್ಟೆಯಿಂದ ಮಾಡುತ್ತಾರೆ ಹಾಗಾಗಿ ರಾಷ್ಟೀಯ ಸೇವಾ ಯೋಜನೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಎಂದು ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಷನಿ ನಿಲಯ ಇಲ್ಲಿನ ನಿವೃತ್ತ ಪರೀಕ್ಷಾಂಗ ಕುಲಸಚಿವೆ ಪ್ರೊ. ವಿನಿತ.ಕೆ ಹೇಳಿದರು.

ಕೂಳೂರಿನ ಎನಪೋಯ ಪದವಿ ಕಾಲೇಜಿನಲ್ಲಿ ರಾಷ್ಟೀಯ ಸೇವಾ ಯೋಜನೆ ತಂಡ -10 ಇದರ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟೀಯ ಸೇವಾ ಯೋಜನೆ-2024 ದಿನಾಚರಣೆಯಲ್ಲಿ ಮಾತನಾಡಿದ ಇವರು ವಿದ್ಯಾರ್ಥಿಗಳಿಗೆ ಬೌದ್ಧಿಕ ಮಟ್ಟದ ಶಿಕ್ಷಣವನ್ನು ಶಿಕ್ಷಣ ಸಂಸ್ಥೆಗಳು ನೀಡಿದರೆ ಸಾಮಾಜಿಕವಾಗಿ ಎಲ್ಲರಲ್ಲೂ ಒಳಗೊಳ್ಳುವ ನಿಷ್ಕಲ್ಮಶ ಮನೋಭಾವವನ್ನು ರಾಷ್ಟೀಯ ಸೇವಾ ಯೋಜನೆಯು ನೀಡುತ್ತದೆ ಎಂದರು.

ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಅರುಣ್. ಎ ಭಾಗವತ್ ಮಾತನಾಡಿ ವಿದ್ಯಾರ್ಥಿ ಯುವ ಸಮೂಹಕ್ಕೆ ಸಮಯದ ಮಹತ್ವ, ಸೇವೆಯ ಮಹತ್ವ ಮತ್ತು ಕೂಡಿ ಬಾಳುವ ಮಹತ್ವವನ್ನು ರಾಷ್ಟ್ರೀಯ ಸೇವಾ ಯೋಜನೆ ಕಲಿಸಿಕೊಡುತ್ತದೆ ಎಂದರು

ವೇದಿಕೆಯಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಶರೀನಾ. ಪಿ, ನಾರಾಯಣ ಸುಕುಮಾರ್, ಡಾ. ಜೀವನ್ ರಾಜ್, ಹಾಗು ರಾಷ್ಟೀಯ ಸೇವಾ ಯೋಜನೆ ತಂಡ-10 ಇದರ ಯೋಜನಾಧಿಕಾರಿ ಅಬ್ದುಲ್ ರಶೀದ್.ಎಂ, ಹಾಗು ತಂಡದ ವಿದ್ಯಾರ್ಥಿ ನಾಯಕ ಜುಲ್ಫಿಕರ್ ಅಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಅಭಿರಾಮಿ ನಿರೂಪಿಸಿದರು, ಝುಲ್ಫಿಕರ್ ಅಲಿ ವಂದಿಸಿದರು.

Leave a Reply

Your email address will not be published. Required fields are marked *