Visitors have accessed this post 593 times.

ಬೆಳ್ತಂಗಡಿ: ಆಯುಧ ಪೂಜೆ ವೇಳೆ ಹೃದಯಾಘಾತ, ಯುವಕ ನಿಧನ

Visitors have accessed this post 593 times.

ಬೆಳ್ತಂಗಡಿ: ಯುವಕನೊಬ್ಬ ಶುಕ್ರವಾರ ನಡೆದ ಆಯಧ ಪೂಜೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.


ಅತ್ತಾಜೆ ರಮೇಶ್ ಭಟ್ ಮತ್ತು ಶಾರದ ದಂಪತಿಯ ಪುತ್ರ ಆದಿತ್ಯ ಭಟ್ (29) ಮೃತ ದುರ್ದೈವಿ.

ಆದಿತ್ಯ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಹೃದಯ ಸ್ತಂಭನಕ್ಕೆ ಕಾರಣವಾಯಿತು.

ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಅವರು ಜರ್ಮನಿಯಲ್ಲಿ ಸ್ವಂತ ಸ್ಟಾರ್ಟಪ್ ನಡೆಸುತ್ತಿದ್ದರು. ಅವರು ತಂದೆ-ತಾಯಿ, ಸಹೋದರಿ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *