Visitors have accessed this post 861 times.
ಉಡುಪಿ: ಮಲ್ಪೆಯಲ್ಲಿ ಕಳೆದ ಮೂರು ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ7 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಸಿಕ್ಕಿಬಿದ್ದಿದ್ದು ಹೇಗೆ?
ಬಂಧನಕ್ಕೆ ಒಳಗಾಗಿರುವ ಮಾಣಿಕ್ ಹುಸೈನ್ ನಕಲಿ ಪಾಸ್ಪೋರ್ಟ್ ಬಳಸಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದುಬೈ ಪರಾರಿಯಾಗಲು ಯತ್ನಿಸಿದ್ದ. ವಿಮಾನ ನಿಲ್ದಾಣದಲ್ಲಿ ದಾಖಲಾತಿ ಪರಿಶೀಲಿಸುವ ಸಂದರ್ಭದಲ್ಲಿ ಅನುಮಾನಗೊಂಡ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಈ ವೇಳೆ ಆತ ಅಕ್ರಮವಾಗಿ ಬಾಂಗ್ಲಾದೇಶದಿಂದ ನುಸುಳಿ ನಕಲಿ ಆಧಾರ್ ಕಾರ್ಡ್, ಪಾಸ್ಪೋರ್ಟ್ ಪಡೆದ ವಿಚಾರ ಬೆಳಕಿಗೆ ಬಂದಿದೆ. ಕೂಡಲೇ ವಿಮಾನ ನಿಲ್ದಾಣದ ಅಧಿಕಾರಿಗಳು ಈತನ ಬಗ್ಗೆ ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈತನನ್ನು ಬಂಧಿಸಿದ ಬಳಿಕ ಈತನೊಂದಿಗೆ ಮತ್ತಷ್ಟು ಜನ ಬಾಂಗ್ಲಾದೇಶಿ ಪ್ರಜೆಗಳು ದೇಶದೊಳಗೆ ನುಸುಳಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈತ ನೀಡಿದ ಮಾಹಿತಿ ಆಧಾರದಲ್ಲಿ ಮತ್ತೆ 6 ಮಂದಿಯನ್ನು ಉಡುಪಿಯ (Udupi) ಮಲ್ಪೆ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಯುತ್ತಿದೆ.