January 16, 2026
WhatsApp Image 2024-10-14 at 11.30.35 AM

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿ.ಸಿರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58) ಹಾಗೂ ಚಾಲಕ ರೂಪೇಶ್ (40) ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರನ್ನು ಚಲಾಯಿಸುತ್ತಿದ್ದ ರೂಪೇಶ್ ಅವರ ಪತ್ನಿ ಸುಚಿತ್ರ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಬೆಳಿಗ್ಗಿನ ಜಾವ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್. ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂಲತಃ ಮಂಗಳೂರು ಕೊಡಿಯಾಲ್ ಬೈಲು ನಿವಾಸಿಯಾದ ಪಿಡಬ್ಲೂಡಿ ಇಂಜಿನಿಯರ್ ಗೋಪಾಲ ಸಹೋದರಿ ಭಾಗೀರಥಿ ಅವರು ಮೃತಪಟ್ಟಿದ್ದಾರೆ. ಭಾಗೀರಥಿ ಅವರ ಮಗಳು ಸುಚಿತ್ರ ಅವರ ಪತಿ ರೂಪೇಶ್ ಅವರು ತುಮಕೂರು ಜಿಲ್ಲೆಯವರಾಗಿದ್ದು, ದಸರಾ ರಜೆಯಲ್ಲಿ ಅಳಿಯ ಮಗಳ ಜೊತೆ ತುಮಕೂರಿಗೆ ಹೋಗಿ ವಾಪಾಸ್ಸು ಮಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

About The Author

Leave a Reply