Visitors have accessed this post 476 times.
ಮಲ್ಪೆ: ಶಿರೂರು ದುರಂತದಲ್ಲಿ ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಈಶ್ವರ್ ಮಲ್ಪೆ ಅವರ ಇಬ್ಬರು ಮಕ್ಕಳಿಗೆ ಕೇರಳದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಈಶ್ವರ್ ಮಲ್ಪೆ ಅವರ ಇಬ್ಬರು ಮಕ್ಕಳಾದ ಕಾರ್ತಿಕ್ (23), ಬ್ರಾಹ್ಮಿ (7) ಅನಾರೋಗ್ಯ ಪೀಡಿತರಾಗಿದ್ದು, ವೈದ್ಯಕೀಯ ಚಿಕಿತ್ಸೆಗಳಿಗೆ ಲಕ್ಷಾಂತರ ರೂ. ವ್ಯಯಿಸಬೇಕಿದೆ. ಇದೀಗ ಅವರ ಇಬ್ಬರು ಮಕ್ಕಳ ಚಿಕಿತ್ಸೆಯನ್ನು ಉಚಿತವಾಗಿ ನೀಡುವುದಾಗಿ ಕೇರಳ ರಾಜ್ಯದ ಸಂಘ, ಸಂಸ್ಥೆಯವರು ಮುಂದೆ ಬಂದಿದ್ದು, ಕೇರಳದ ಕೋಯಿಕ್ಕೋಡ್ನ ಮಲ್ಟಿ ಸ್ಪೆಶಾಲಿಟಿ ಮೈತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಆಸ್ಪತ್ರೆಯಲ್ಲಿ ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು, ಗುಣಮುಖರಾಗುವ ನಂಬಿಕೆ ಹೊಂದಿದ್ದೇವೆ. ಎಷ್ಟೇ ಖರ್ಚಾದರೂ ನಾವು ಭರಿಸುತ್ತೇವೆ ಎಂದು ಅಲ್ಲಿನ ಸಂಘ ಸಂಸ್ಥೆಯವರು ಅಭಿಮಾನ ತೋರಿದ್ದಾರೆ ಎಂದು ಈಶ್ವರ್ ತಿಳಿಸಿದ್ದಾರೆ. ಉಡುಪಿ ಸಹಿತ ಕರಾವಳಿಯ ಸಂಘ ಸಂಸ್ಥೆಯವರು, ಸಾರ್ವಜನಿಕರು ಸಾಕಷ್ಟು ಸಹಕಾರ ನೀಡಿದ್ದಾರೆ. ಆದರೆ ಸರಕಾರದಿಂದ ಸಹಾಯ ದೊರೆತಿಲ್ಲ. ಮಕ್ಕಳ ಚಿಕಿತ್ಸೆಗಾಗಿ ಸದ್ಯಕ್ಕೆ ಕೇರಳದಲ್ಲಿದ್ದೇನೆ ಎಂದು ಈಶ್ವರ್ ತಿಳಿಸಿದ್ದಾರೆ.