Visitors have accessed this post 151 times.
ಪುತ್ತೂರು: ಮಗನೊಂದಿಗೆ ವಾಸವಿದ್ದ ಬಡ ಮಹಿಳೆಯ ಗುಡಿಸಲಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟ ಘಟನೆ ಪುತ್ತೂರು ತಾಲೂಕಿನ ಕುಂಬ್ರ ಸಮೀಪದ ಸಾರಪುಣಿಪಾದಡ್ಕ ಎಂಬಲ್ಲಿ ನಡೆದಿದೆ.
ಪಾದೆಡ್ನ ನಿವಾಸಿ ಪದ್ಮಾವತಿ ಹಾಗೂ ಅವರ 8 ವರ್ಷದ ಪುತ್ರ ವಾಸ್ತವ್ಯವಿದ್ದ, ಶೀಟ್ ಅಳವಡಿಸಿರುವ ಗುಡಿಸಲು ಮನೆಯಲ್ಲಿ ಬೆಂಕಿ ಅವಘಡ ನಡೆದಿದೆ.
ಬೆಂಕಿ ಅವಘಡದಿಂದ ಮನೆಯೊಳಗೆ ಬ್ಯಾಗ್ನಲ್ಲಿ ಇರಿಸಿದ್ದ 15 ಸಾವಿರ ನಗದು, ಆಧಾರ್ ಕಾರ್ಡ್ ಸಹಿತ ದಾಖಲೆ ಪತ್ರಗಳು, ದಿನಸಿ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ. ಗೋಡೆ ಇಲ್ಲದ ಗುಡಿಸಲಿನ ಸುತ್ತ ಅಳವಡಿಸಲಾಗಿದ್ದ ನೆಟ್ ಸುಟ್ಟು ಹೋಗಿದೆ ಎನ್ನಲಾಗಿದೆ.
ಪದ್ಮಾವತಿ ಅವರು ಶುಕ್ರವಾರ ಕೆಲಸಕ್ಕೆ ಹೋಗಿದ್ದ ವೇಳೆ ಸ್ಥಳೀಯರು ಅವರಿಗೆ ಕರೆ ಮಾಡಿ ಮನೆಗೆ ಬೆಂಕಿ ಬಿದ್ದಿರುವ ವಿಚಾರ ತಿಳಿಸಿದ್ದರು. ಕೂಡಲೇ ಅವರು ಮನೆಗೆ ಬಂದಿದ್ದರೂ ಆ ವೇಳೆಗಾಗಲೇ ಗುಡಿಸಲಿನ ಒಂದು ಭಾಗ ಬೆಂಕಿಗಾಹುತಿಯಾಗಿತ್ತು. ಬೆಂಕಿ ಅವಘಡ ನಡೆದ ವಿಷಯ ತಿಳಿದ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಎಸ್ಕೆಎಎಸ್ಎಫ್ ಮುಖಂಡ ಅಶ್ರಫ್ ಸಾರೆಪುಣಿ ಜತೆಗೆ ಸ್ಥಳೀಯರಾದ ಹುಕ್ರ ಎಂಬುವರು ಬೆಂಕಿ ನಂದಿಸಲು ಶ್ರಮಿಸಿದರು. ಬಡ 15 ಸಾವಿರ ಹಣ ಬೆಂಕಿಗಾಹುತಿಯಾಗಿದ್ದು ಕೈಯಲ್ಲಿ ಒಂದು ರೂಪಾಯಿ ಹಣ ಇಲ್ಲ ಎಂದು ಮಹಿಳ ಅಲವತ್ತುಕೊಂಡಿದ್ದಾರೆ.