
ಕುಂದಾಪುರ: ಕೋಟೇಶ್ವರದ ಬೀಜಾಡಿಯ ಅಮಾವಾಸ್ಯೆ ಕಡು ಎಂಬಲ್ಲಿ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

ನೀರುಪಾಲಾದವರು ಸಂತೋಷ (23), ಅಜಯ್(22) ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಸಂತೋಷ್ ನ ಮೃತದೇಹ ಪತ್ತೆಯಾಗಿದ್ದು ಇನ್ನೋರ್ವ ಅಜಯ್ ಗಾಗಿ ಹುಡುಕಾಟ ನಡೆಯುತ್ತಿದೆ.

ಮದುವೆ ಕಾರ್ಯಕ್ರಮಕ್ಕೆಂದು ಇಬ್ಬರು ಬೆಂಗಳೂರಿನಿಂದ ಕುಂದಾಪುರಕ್ಕೆ ಬಂದಿದ್ದು ಬೀಜಾಡಿ ಬೀಚ್ ಪಕ್ಕದ ರೆಸಾರ್ಟ್ ವೊಂದರಲ್ಲಿ ಉಳಿದುಕೊಂಡಿದ್ದರು ಎಂದು ಹೇಳಲಾಗಿದೆ.
ಶನಿವಾರ ಬೆಳಿಗ್ಗೆ ಸ್ನೇಹಿತರೊಂದಿಗೆ ಸಮುದ್ರದಲ್ಲಿ ಈಜಲು ತೆರಳಿದ ವೇಳೆ ಇಬ್ಬರು ಸಮುದ್ರದ ಅಲೆಗೆ ಸಿಲುಕಿ ನೀರುಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಾಹಿತಿ ತಿಳಿದ ತಕ್ಷಣ ಸ್ಥಳೀಯರು ಸಂತೋಷ್ ನನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಇನ್ನೋರ್ವ ಮೂಲತ ಕುಂದಾಪುರದ ಆನಗಳ್ಳಿ ಅಜಯ್ ಗಾಗಿ ಹುಡುಕಾಟ ನಡೆಯುತ್ತಿದೆ.
ಘಟನಾ ಸ್ಥಳಕ್ಕೆ ಕುಂದಾಪುರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.