October 13, 2025
WhatsApp Image 2024-11-21 at 9.19.01 AM
ಉಳ್ಳಾಲ: ಕೊಣಾಜೆ ಠಾಣಾ ವ್ಯಾಪ್ತಿಯ ಬೋಳಿಯಾರ್‌ ಗ್ರಾಮದ ಕಾಂಪಾಡಿ ಬಳಿ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಆರೋಪಿ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯುವತಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಬಾಲಕ ಸ್ಕೂಟರ್‌ನಲ್ಲಿ ಬಂದು ಆಕೆಯ ದೇಹ ಸ್ಪರ್ಶಸಿ ಮಾನಭಂಗಕ್ಕೆ ಯತ್ನಿಸಿದ್ದ. ಈ ಸಂದರ್ಭ ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ. ಯುವತಿ ಕೆಥೋಲಿಕ್‌ ಸಭಾದ ಮುಖ್ಯಸ್ಥರಿಗೆ ಮಾಹಿತಿ ನೀಡಿದ್ದು, ಕೆಥೋಲಿಕ್‌ ಸಭಾ ಕೇಂದ್ರೀಯ ಅಧ್ಯಕ್ಷ ಆಲ್ವಿನ್‌ ಡಿ’ಸೋಜಾ ಪಾನೀರು, ಅಮ್ಮೆಂಬಳ ಚರ್ಚ್‌ ಪಾಲನ ಸಮಿತಿ ಉಪಾಧ್ಯಕ್ಷ ರೋಬರ್ಟ್‌ ಮತ್ತು ಕೆಥೋಲಿಕ್‌ ಸಭಾದ ಮುಖಂಡರು ಆಗಮಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾರೆ.
ಸ್ಥಳೀಯರ ಸಹಕಾರದೊಂದಿಗೆ ಆರೋಪಿಯನ್ನು ಕೊಣಾಜೆ ಪೋಲೀಸರ ವಶಕ್ಕೆ ನೀಡಿದ್ದು, ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply