BIG NEWS : ಬಿಜೆಪಿ ಅವಧಿಯಲ್ಲೂ ಬಸ್ ಟಿಕೆಟ್​ ದರ ಏರಿಕೆ : ಪಟ್ಟಿ ರಿಲೀಸ್​ ಮಾಡಿದ ರಾಮಲಿಂಗಾರೆಡ್ಡಿ

ಬೆಂಗಳೂರು : ಸಾರಿಗೆ ಬಸ್ಗಳಲ್ಲಿ ಟಿಕೆಟ್ 15 ರಷ್ಟು ಹೆಚ್ಚಿಗೆ ಮಾಡಿ ರಾಜ್ಯ ಸರ್ಕಾರ ನಿನ್ನೆ ಅಧಿಕೃತ ಆದೇಶ ಹೊರಡಿಸಿದೆ. ಈ ವಿಚಾರವಾಗಿ ವಿಪಕ್ಷ ಬಿಜೆಪಿ ನಾಯಕರು ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಪ್ರಯಾಣಿಕರಿಗೆ ಹೂ ನೀಡಿ ಪ್ರತಿಭಟನೆ ನಡೆಸಿದರು. ಈ ವಿಚಾರವಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ಅವಧಿಯಲ್ಲಿ ಕೂಡ ಸಾರಿಗೆ ಬಸ್ ಗಳ ಟಿಕೆಟ್ ದರದಲ್ಲಿ ಏರಿಕೆ ಮಾಡಿರುವ ಪಟ್ಟಿ ರಿಲೀಸ್ ಮಾಡಿದ್ದಾರೆ.

ಹೌದು ಬಿಜೆಪಿ ಅವಧಿಯಲ್ಲಿ ಸಾರಿಗೆ ಸಚಿವರಾಗಿದ್ದ ವಿಪಕ್ಷ ನಾಯಕ ಆರ್​​. ಅಶೋಕ್ ಅವಧಿಯಲ್ಲಿ ಟಿಕೆಟ್​ ದರ ಏರಿಕೆ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಟಾಂಗ್​ ಕೊಟ್ಟಿದ್ದಾರೆ.ಬಿಜೆಪಿ ಸರ್ಕಾರ ಇದ್ದಾಗ ವಿಪಕ್ಷ ನಾಯಕ ಆರ್​​. ಅಶೋಕ್ ಅವಧಿಯಲ್ಲಿ ಯಾವ್ಯಾವ ವರ್ಷದಲ್ಲಿ ಎಷ್ಟೆಷ್ಟು ದರ ಏರಿಕೆ‌ ಎಂದು ಪಟ್ಟಿ ರಿಲೀಸ್​ ಮಾಡಿದೆ.

Leave a Reply