ಮಂಗಳೂರು: ಅಕ್ರಮ ಮರಳುಗಾರಿಕೆ, ಮೂವರ ಸೆರೆ – ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳ ವಶ

ಮಂಗಳೂರು: ನೇತ್ರಾವತಿ ನದಿ ತೀರ, ಫಲ್ಗುಣಿ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಪ್ರಕರಣವನ್ನು ಪತ್ತೆ ಮೂವರನ್ನು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಸೊತ್ತು ಗಳನ್ನು ವಶಪಡಿಸಿಕೊಂಡಿದ್ದಾರೆ ಸೋಮವಾರ ರಾತ್ರಿ 9:30ರ ವೇಳೆ ಕಣ್ಣೂರು ಮಸೀದಿ ಹಿಂಭಾಗದ ನೇತ್ರಾವತಿ ನದಿ ತೀರದಲ್ಲಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ದೋಣಿಯ ಮೂಲಕ ತಂದು ಲಾರಿಗಳಿಗೆ ಲೋಡ್ ಮಾಡುತ್ತಿದ್ದ ವೇಳೆ ಕಂಕನಾಡಿ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ರಮವಾಗಿ ಮರಳುಗಾರಿಕೆ – ನಡೆಸುತ್ತಿದ್ದ ಆರೋಪಿಗಳು ಸ್ಥಳದಿಂದಪರಾರಿಯಾಗಿದ್ದಾರೆ ಸ್ಥಳದಲ್ಲಿ ಮರಳುಗಾರಿಕೆಗೆ ಉಪಯೋಗಿ ಸಿದ ಮೂರು ಟಿಪ್ಪರ್, 2 ದೋಣಿ, ಮರಳು ಹಾಗೂ ಇತರ ಸೊತ್ತುಗಳನ್ನು ಪಂಚರ ಸಮಕ್ಷಮ ವಶಪಡಿಸಿಕೊಳ್ಳಲಾಗಿದೆ. ಸ್ವಾಧೀನ ಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಸುಮಾರು 18,09,000 ರೂ. ಎಂದು ಪೊಲೀಸರು ತಿಳಿಸಿದ್ದಾರೆ.ರಾಜ್ಯ ಸರಕಾರಕ್ಕೆ ರಾಜಧನ ಪಾವತಿಸದೆ ಮರಳನ್ನು ಕಳ್ಳತನ ಮಾಡಿರುವ ಕುರಿತಂತೆ ಪ್ರಕರಣ ದಾಖಲಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ನಗರದ ಹೊರವಲಯದಮಂಜಲ್ಪಾದೆಯ ಫಲ್ಗುಣಿ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಮೂವರನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ ಬಂದಿತ ಆರೋಪಿಗಳನ್ನು ಸುಭಾಷ್(65),ಲಲಿತ್ ಸಾನಿ(25) ಧರ್ಮೇಂದ್ರ (28) ಎಂದು ಗುರುತಿಸಲಾಗಿದೆ ಖಚಿತ ಮಾಹಿತಿಯಂತೆ ಸೋಮವಾರ ರಾತ್ರಿ 9:30ರ ವೇಳೆಗೆ ದಾಳಿ ನಡೆಸಿದ್ದು, ಈ ವೇಳೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಅವರನ್ನು ಹಿಡಿದು ವಿಚಾರಣೆ ನಡೆಸಿದಾಗ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅದ್ಯಪಾಡಿ ಗ್ರಾಮದ ದೈವಂಗಳ ಗುಡ್ಡೆ ಎಂಬಲ್ಲಿ ಫಲ್ಗುಣಿ ನದಿ ಪಾತ್ರದಲ್ಲಿ ಶೆಡ್ ನಿರ್ಮಿಸಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಗಣಿ ಇಲಾಖೆ ಅಧಿಕಾರಿಗಳು ಮತ್ತು ಉಪ ತಹಶೀಲ್ದಾರರ ನೇತೃತ್ವದ ತಂಡ ದಾಳಿ ನಡೆಸಿದೆ. ದಾಳಿ ವೇಳೆ ಮರಳುಗಾರಿಕೆ ನಡೆಸುತ್ತಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ 6 ಕಬ್ಬಿಣದ ದೋಣಿಗಳ ಮೂಲಕ ಮರಳುಗಾರಿಕೆ ನಡೆಸಿರುವುದು ಕಂಡು ಬಂದಿದೆ. 13 ಮೆಟ್ರಿಕ್ ಟನ್ ಮರಳು ಶೇಖರಿಸಲಾಗಿತ್ತು. ವಶಕ್ಕೆ ಪಡೆಯಲಾದ ಮರಳಿನ ಮೌಲ್ಯ 9,100 ರೂ. ಮತ್ತು ದೋಣಿಗಳ ಮೌಲ್ಯ 4,50,000 ರೂ. ಎಂದು ಅಂದಾಜಿಸಲಾಗಿದೆ.ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply